ಆ್ಯಪ್ನಗರ

ಲಾಲೂ, ಕುಟುಂಬಿಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ರೈಲ್ವೆ ಹೋಟೆಲ್ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತವರ ಕುಟುಂಬಿಕರ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.

ಟೈಮ್ಸ್ ಆಫ್ ಇಂಡಿಯಾ 27 Jul 2017, 6:41 pm
ಹೊಸದಿಲ್ಲಿ: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ರೈಲ್ವೆ ಹೋಟೆಲ್ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತವರ ಕುಟುಂಬಿಕರ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.
Vijaya Karnataka Web ed registers money laundering case against lalu prasad family
ಲಾಲೂ, ಕುಟುಂಬಿಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್


ಕೇಂದ್ರೀಯ ತನಿಖಾ ದಳದ (ಸಿಬಿಐ) ಎಫ್‌ಐಆರ್‌ ಪ್ರತಿಗಳನ್ನು ಪಡೆದಿರುವ ಈಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿಕೊಂಡಿದೆ. ಯುಪಿಎ ಅವಧಿಯಲ್ಲಿ ಲಾಲೂ ಪ್ರಸಾದ್ ರೈಲ್ವೆ ಸಚಿವರಾಗಿದ್ದಾಗ ರೈಲ್ವೆ ಹೋಟೆಲ್‌ಗಳ ಹಂಚಿಕೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿದ್ದರು.

ಈ ತಿಂಗಳ ಆರಂಭದಲ್ಲಿ ಲಾಲೂ ಪ್ರಸಾದ್ ವಿರುದ್ಧ ಕ್ರಿಮಿನಲ್ ಎಫ್‌ಐಆರ್ ದಾಖಲಿಸಿದ್ದ ಸಿಬಿಐ ಹಲವು ಕಡೆ ದಾಳಿ ನಡೆಸಿತ್ತು. ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಶ್ವಿ ಯಾದವ್ ಹಾಗೂ ಇತರರ ವಿರುದ್ಧ ತನಿಖೆ ನಡೆಸಲಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಎಫ್‍ಐಆರ್‌ನಲ್ಲಿ ವಿಜಯ್ ಕೊಚ್ಚಾರ್, ವಿನಯ್ ಕೊಚ್ಚಾರ್ (ಇಬ್ಬರೂ ಸುಜಾತಾ ಹೋಟೆಲ್ ನಿರ್ದೇಶಕರು), ಈಗ ಲಾರಾ ಪ್ರಾಜೆಕ್ಟ್ಸ್ ಆಗಿರುವ ಡಿಲೈಟ್ ಮಾರ್ಕೆಟಿಂಗ್ ಕಂಪೆನಿ ಹಾಗೂ ಐಆರ್‌ಸಿಟಿಸಿ ವ್ಯವಸ್ಥಾಪಕ ನಿರ್ದೇಶಕ ಪಿ ಕೆ ಗೋಯಲ್ ಹೆಸರುಗಳೂ ಇವೆ. ಪಾಟ್ನಾದಲ್ಲಿ ಬೆಲೆಬಾಳುವ ಭೂಮಿ ಪಡೆದು ಸರಳ ಗುಪ್ತಾ ಒಡೆತನದ ಬೇನಾಮಿ ಕಂಪೆನಿಗೆ ಐಆರ್‌ಸಿಟಿಸಿಯ ಎರಡು ಹೋಟೆಲ್‌ಗಳ ನಿರ್ವಹಣೆಯನ್ನು ನೀಡಲಾಗಿತ್ತು ಎಂಬ ಆರೋಪವೂ ಲಾಲೂ ಮೇಲಿದೆ.

ED registers money laundering case against Lalu Prasad, family

In fresh trouble for RJD chief Lalu Prasad, the ED has registered a money laundering case against him and his family members in a railway hotels allotment corruption case dating back to the UPA tenure, officials said today.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ