ಆ್ಯಪ್ನಗರ

ವಿಮಾನಯಾನ ಹಗರಣ: ಚಿದಂಬರಂಗೆ ಸಮನ್ಸ್‌

ಈ ಪ್ರಕರಣದಲ್ಲಿ ಮಾಜಿ ನಾಗರಿಕ ವಿಮಾನ ಸಚಿವ ಪ್ರಫುಲ್‌ ಪಟೇಲ್‌ ಅವರು ವಿಚಾರಣೆ ವೇಳೆ ನೀಡಿದ್ದ ಹೇಳಿಕೆಗಳನ್ನು ಆಧರಿಸಿ ಇ.ಡಿ ವಿಚಾರಣೆಗೆ ಹಾಜರಾಗುವಂತೆ ಚಿದಂಬರಂ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ.

Agencies 20 Aug 2019, 5:00 am
ಹೊಸದಿಲ್ಲಿ: ಯುಪಿಎ ಸರಕಾರದ ಅವಧಿಯಲ್ಲಿ ನಡೆದಿರುವ ವಿಮಾನಯಾನ ಹಗರಣ ಸಂಬಂಧ ಜಾರಿ ನಿರ್ದೇಶನಾಲಯವು ಆ.23ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ.
Vijaya Karnataka Web ed summons p chidambaram in aviation scam pmla case
ವಿಮಾನಯಾನ ಹಗರಣ: ಚಿದಂಬರಂಗೆ ಸಮನ್ಸ್‌


ಏರ್‌ ಇಂಡಿಯಾ ಸಂಸ್ಥೆಗೆ ಬೋಯಿಂಗ್‌ ಮತ್ತು ಏರ್‌ಬಸ್‌ನಿಂದ 70,000 ಕೋಟಿ ರೂ. ಮೊತ್ತದಲ್ಲಿ 111 ವಿಮಾನಗಳನ್ನು ಖರೀದಿಸುವುದಕ್ಕೆ ಪಿ.ಚಿದಂಬರಂ ನೇತೃತ್ವದ ಉನ್ನತ ಮಟ್ಟದ ಸಮಿತಿ 2009ರಲ್ಲಿ ಒಪ್ಪಿಗೆ ಸೂಚಿಸಿತ್ತು. ಈ ವಹಿವಾಟಿನಲ್ಲಿ ಚಿದಂಬರಂ ಅವರು ಲಾಬಿಕೋರ ದೀಪಕ್‌ ತಲ್ವಾರ್‌ ಅವರ ಪರವಾಗಿ ಅನುಕೂಲ ಮಾಡಿಕೊಟ್ಟಿದ್ದರಿಂದ ಏರ್‌ ಇಂಡಿಯಾ ಭಾರಿ ನಷ್ಟ ಅನುಭವಿಸಿತು ಎಂಬುದು ಇ.ಡಿ.ಆರೋಪವಾಗಿದೆ. ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ನಾಗರಿಕ ವಿಮಾನ ಸಚಿವ ಪ್ರಫುಲ್‌ ಪಟೇಲ್‌ ಅವರು ವಿಚಾರಣೆ ವೇಳೆ ನೀಡಿದ್ದ ಹೇಳಿಕೆಗಳನ್ನು ಆಧರಿಸಿ ಇ.ಡಿ ವಿಚಾರಣೆಗೆ ಹಾಜರಾಗುವಂತೆ ಚಿದಂಬರಂ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ.

ತಲ್ವಾರ್‌ ಅವರನ್ನು ಈ ವರ್ಷದ ಜನವರಿಯಲ್ಲಿ ಅರಬ್‌ ಸಂಯುಕ್ತ ಸಂಸ್ಥಾನವು ಭಾರತಕ್ಕೆ ಹಸ್ತಾಂತರಿಸಿದ್ದು, ಅವರನ್ನೂ ಇ.ಡಿ. ವಿಚಾರಣೆ ನಡೆಸುತ್ತಿದೆ. ಏರ್ಸೆಲ್‌-ಮ್ಯಾಕ್ಸಿಸ್‌ ಮತ್ತು ಐಎನ್‌ಎಕ್ಸ್‌ ಮಿಡಿಯಾ ಪ್ರಕರಣಗಳಲ್ಲಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಇಡಿ ಹಲವು ಬಾರಿ ವಿಚಾರಣೆ ನಡೆಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ