ಆ್ಯಪ್ನಗರ

ಏಕಕಾಲಕ್ಕೆ 2 ಕ್ಷೇತ್ರದಿಂದ ಸ್ಪರ್ಧೆಗೆ ತಡೆ: ಆಯೋಗ ಸ್ಪಷ್ಟನೆ

ಲೋಕಸಭೆ ಇಲ್ಲವೇ ವಿಧಾನಸಭೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಸ್ಪರ್ಧಿಸಲು ಬರುವುದಿಲ್ಲ

Vijaya Karnataka Web 11 Dec 2017, 10:09 pm

ಹೊಸದಿಲ್ಲಿ: ತಾತ್ವಿಕವಾಗಿ ಯೋಚಿಸುವುದಾದರೆ ಲೋಕಸಭೆ ಇಲ್ಲವೇ ವಿಧಾನಸಭೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಸ್ಪರ್ಧಿಸಲು ಬರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ಗೆ ಸೋಮವಾರ ತಿಳಿಸಿದೆ.

Vijaya Karnataka Web election commission clarifies
ಏಕಕಾಲಕ್ಕೆ 2 ಕ್ಷೇತ್ರದಿಂದ ಸ್ಪರ್ಧೆಗೆ ತಡೆ: ಆಯೋಗ ಸ್ಪಷ್ಟನೆ


ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಸ್ಪರ್ಧಿಸುವುದಕ್ಕೆ ನಿಷೇಧ ಹೇರುವಂತæ ಕೇಂದ್ರ ಹಾಗೂ ಆಯೋಗಕ್ಕೆ ಸೂಚನæ ನೀಡಬೇಕೆಂದು ಕೋರಿ ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಚು.ಆಯೋಗ ಕೋರ್ಟ್‌ಗೆ ತನ್ನ ನಿಲುವನ್ನು ಪ್ರಮಾಣಪತ್ರದಲ್ಲಿ ಸ್ಪಷ್ಟಪಡಿಸಿದೆ.

ಆದರೆ ಈ ಅರ್ಜಿಯ ವಿಚಾರಣೆ ಕೈಗೊಂಡ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠವು, ಈ ಬಗ್ಗೆ ಅಟಾರ್ನಿ ಜನರಲ್‌ ಅವರ ಅಭಿಪ್ರಾಯ ಕೋರಿದ್ದು, ಮನವಿಯ ಪತ್ರಿಗಳನ್ನು ಚುನಾವಣಾ ಆಯೋಗ ಹಾಗೂ ಅಟಾರ್ನಿ ಜನರಲ್‌ಗೆ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ