ಆ್ಯಪ್ನಗರ

ಬಿಹಾರ ಫಲಿತಾಂಶ: ಮಧ್ಯಾಹ್ನ 1:30ಕ್ಕೆ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ!

ಇಂದು(ನ.10) ಮಧ್ಯಾಹ್ನ 1:30ಕ್ಕೆ ಪತ್ರಿಕಾಗೊಷ್ಠಿ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಉಪಚುನಾವಣಾ ಆಯುಕ್ತರಾದ ಸುದೀಪ್ ಜೈನ್, ಚಂದ್ರಭೂಷಣ್ ಸಿಂಗ್ ಹಾಗೂ ಆಶಿಶ್ ಕುಂದ್ರಾ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

Vijaya Karnataka Web 10 Nov 2020, 12:12 pm
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯುವ ನಿರೀಕ್ಷೆ ಇದೆ ಎನ್ನಲಾಗಿದೆ.
Vijaya Karnataka Web Election-Commission
ಸಂಗ್ರಹ ಚಿತ್ರ


ಈ ಹಿನ್ನೆಲೆಯಲ್ಲಿ ಇಂದು(ನ.10) ಮಧ್ಯಾಹ್ನ 1:30ಕ್ಕೆ ಪತ್ರಿಕಾಗೊಷ್ಠಿ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಆದರೆ ಮತದಾನದ ಫಲಿತಾಂಶ ಈ ವೇಳೆ ಘೋಷಣೆಯಾಗುವುದಿಲ್ಲ, ಕಾರಣ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಘೊಷಣೆಯಾಗಲು ಇನ್ನೂ ಬಹಳ ಸಮಯ ಬೇಕಾಗಬಹುದು ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಆಯೋಗ, ಮಧ್ಯಾಹ್ನ 1:30ಕ್ಕೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುವುದಾಗಿ ಹೇಳಿದೆ. ಕೇವಲ ಬಿಹಾರ ಮಾತ್ರವಲ್ಲದೇ ಉತ್ತರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ನಾಗಾಲ್ಯಾಂಡ್ ಹಾಗೂ ಗುಜರಾತ್ ರಾಜ್ಯಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಫಲಿತಾಂಶವನ್ನೂ ಆಯೋಗ ಪ್ರಕಟಿಸಲಿರುವುದು ವಿಶೇಷ.

Bihar Election Vote Counting Live: ಯಾರ ಪಾಲಾಗಲಿದೆ ಬಿಹಾರ? ನಿತೀಶ್‌ ಅಥವಾ ತೇಜಸ್ವಿ?


ಉಪಚುನಾವಣಾ ಆಯುಕ್ತರಾದ ಸುದೀಪ್ ಜೈನ್, ಚಂದ್ರಭೂಷಣ್ ಸಿಂಗ್ ಹಾಗೂ ಆಶಿಶ್ ಕುಂದ್ರಾ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಸದ್ಯದ ಅಂಕಿ ಅಂಶಗಳ ಪ್ರಕಾರ ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಭಾರೀ ಮುನ್ನಡೆಯನ್ನು ಸಾಧಿಸಿದ್ದು, ಬಿಜೆಪಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಪಕ್ಷವಾಗಿ ಹೊರಹೊಮ್ಮಿದೆ.

ಬದಲಾಯ್ತು ಸನ್ನಿವೇಶ: ಎನ್‌ಡಿಎಗೆ ಭಾರೀ ಮುನ್ನಡೆ, ಆತಂಕದಲ್ಲಿ ಮಹಾಘಟಬಂಧನ್ ಪಾಳೆಯ!

ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಮಹಾಘಟಬಂಧನ್ ಮೈತ್ರಿಕೂಟ, ಇದೀಗ ಹಿನ್ನಡೆ ಅನುಭವಿಸುತ್ತಿದ್ದು, ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ