ಆ್ಯಪ್ನಗರ

ಕೇರಳದ ಬಳಿಕ ತಮಿಳುನಾಡಿನಲ್ಲಿ ಹೇಯ ಕೃತ್ಯ: ನಾಡಿಗೆ ಬಂದ ಆನೆಗೆ ಬೆಂಕಿ ಇಟ್ಟು ಕೊಂದ ರಾಕ್ಷಸರು!

​​ಈ ದುಷ್ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಮಾಸಿನಗುಡಿಯಲ್ಲಿನ ರೆಸಾರ್ಟ್‌ ಬಳಿ ಆನೆಯೊಂದು ಕೆಲ ದಿನ ಹಿಂದೆ ಆಹಾರ ಅರಸುತ್ತಾ ಬಂದಿದೆ. ರಾತ್ರಿ ವೇಳೆ ಬಂದ ಆನೆಯನ್ನು ಓಡಿಸಲು ಸ್ಥಳೀಯರು ಟೈರ್‌ಗೆ ಬೆಂಕಿ ಹಚ್ಚಿ ಎಸೆದು ಚಿತ್ರಹಿಂಸೆ ನೀಡಿದ್ದಾರೆ.

Vijaya Karnataka Web 23 Jan 2021, 6:42 am
ಚೆನ್ನೈ: ಕಾಡು ಪ್ರಾಣಿಗಳಿಗೆ ಚಿತ್ರಹಿಂಸೆ ನೀಡಿ ಸಾಯಿಸುವ ಮಾನವನ ಕ್ರೌರ್ಯ ಎಲ್ಲೆ ಮೀರಿದೆ. ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಫೋಟಕ ತಿನ್ನಿಸಿ ಕೊಂದ ಘಟನೆ ಮಾಸುವ ಮುನ್ನವೇ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಾಸಿನಗುಡಿಯಲ್ಲಿ ಅತ್ಯಂತ ಕ್ರೂರವಾಗಿ 40 ವರ್ಷದ ಆನೆಗೆ ಬೆಂಕಿ ಇಟ್ಟು ಸಾಯಿಸಲಾಗಿದೆ.
Vijaya Karnataka Web Tamilnadu Elephant


ಈ ದುಷ್ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಮಾಸಿನಗುಡಿಯಲ್ಲಿನ ರೆಸಾರ್ಟ್‌ ಬಳಿ ಆನೆಯೊಂದು ಕೆಲ ದಿನ ಹಿಂದೆ ಆಹಾರ ಅರಸುತ್ತಾ ಬಂದಿದೆ. ರಾತ್ರಿ ವೇಳೆ ಬಂದ ಆನೆಯನ್ನು ಓಡಿಸಲು ಸ್ಥಳೀಯರು ಟೈರ್‌ಗೆ ಬೆಂಕಿ ಹಚ್ಚಿ ಎಸೆದು ಚಿತ್ರಹಿಂಸೆ ನೀಡಿದ್ದಾರೆ.


ಟೈರ್‌ ಆನೆಯ ಕಿವಿಗೆ ಸಿಲುಕಿಕೊಂಡು, ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ದೇಹ ವ್ಯಾಪಿಸಿದೆ. ಬೆಂಕಿ ನಂದಿಸಿಕೊಳ್ಳಲು ಹರಸಾಹಸಪಟ್ಟಿದೆ. ಮರಗಳಿಗೆ ದೇಹವನ್ನು ಉಜ್ಜಿ, ಕೊನೆಗೆ ನೀರನ್ನು ಅರಸುತ್ತಾ ಜಲಾಶಯದ ಸಮೀಪ ಬಿದ್ದು ಮೃತಪಟ್ಟಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.


ಇನ್ನು ಘಟನೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ನೆಟ್ಟಿಗರು ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಈ ಹಿಂದೆ ಆಹಾರ ಅರಸಿ ಬಂದ ಆನೆಗೆ ಸ್ಪೋಟಕ ತಿನ್ನಿಸಿ ಕೊಲ್ಲಲಾಗಿತ್ತು. ಇದು ಕೂಡ ಪ್ರಾಣಿ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.
11ನೇ ಸುತ್ತಿನ ಸಂಧಾನವೂ ವಿಫಲ, ರೈತರ ಬಿಕ್ಕಟ್ಟು ಇತ್ಯರ್ಥ ಸಾಧ್ಯತೆ ಕ್ಷೀಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ