ಆ್ಯಪ್ನಗರ

ನವ್ಲಾಖಾ ಸಲ್ಲಿಸಿದ್ದ ಎಫ್‌ಐಆರ್‌ ರದ್ದತಿ ಮನವಿ ಬಗ್ಗೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಅಕ್ರಮ ಚಟುವಟಿಕೆಗಳ ತಡೆ ಕಾಯಿದೆ ಅಡಿಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪವನ್ನು ನವ್ಲಾಖಾ ವಿರುದ್ಧ ಹೊರಿಸಲಾಗಿದೆ.

PTI 27 Jul 2019, 5:00 am
ಮುಂಬಯಿ: ಎಲ್ಗಾರ್‌ ಪರಿಷದ್‌-ಭೀಮಾಕೋರೆಗಾಂವ್‌ ಹಿಂಸಾಚಾರ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದತಿಗೆ ಕೋರಿ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್‌ ನವ್ಲಾಖಾ ಸಲ್ಲಿಸಿದ್ದ ಮನವಿ ಕುರಿತಾದ ತೀರ್ಪನ್ನು ಬಾಂಬೆ ಹೈಕೋರ್ಟ್‌ ಶುಕ್ರವಾರ ಕಾಯ್ದಿರಿಸಿತು.
Vijaya Karnataka Web navalakha


ಪೊಲೀಸರು ಸಲ್ಲಿಸಿರುವ ಕೆಲವು ದಾಖಲೆಗಳು ನವ್ಲಾಖಾ ಅವರು ಅಪರಾಧ ಎಸಗಿಲ್ಲ ಎನ್ನುತ್ತಿವೆ. ಮತ್ತೆ ಕೆಲವು ದಾಖಲೆಗಳ ಬಗ್ಗೆ ಕೂಲಂಕಷ ಪರಿಶೀಲನೆ ಅಗತ್ಯವಿದೆ. ಹಾಗಾಗಿ ಹೆಚ್ಚಿನ ಸಮಯಾವಕಾಶ ಹಿಡಿಯಲಿದೆ ಎಂದು ನ್ಯಾ. ರಂಜಿತ್‌ ಮೊರೆ ಹಾಗೂ ನ್ಯಾ. ಭಾರತಿ ದಾಂಗ್ರೆ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ಅಕ್ರಮ ಚಟುವಟಿಕೆಗಳ ತಡೆ ಕಾಯಿದೆ ಅಡಿಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪವನ್ನು ನವ್ಲಾಖಾ ವಿರುದ್ಧ ಹೊರಿಸಲಾಗಿದೆ.

2017ರ ಡಿ.31 ಹಾಗೂ 2018ರ ಜ.1ರ ನಡುವೆ ಪುಣೆ ಸಮೀಪದ ಭೀಮಾ ಕೋರೆಗಾಂವ್‌ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕಾಗಿ ಸೇರಿದ್ದ ಹಲವು ದಲಿತ ಸಮುದಾಯದವರು ಪ್ರಚೋದನೆಗೊಂಡು ಹಿಂಸಾಚಾರಕ್ಕೆ ಮುಂದಾಗಿದ್ದರು. ಎಲ್ಗಾರ್‌ ಪರಿಷದ್‌ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಕರಣ ಸಂಬಂಧ ಐವರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಬಂಧನದಿಂದ ರಕ್ಷಣೆ ನೀಡುವಂತೆ ಜುಲೈ ಆರಂಭದಲ್ಲಿ ನವ್ಲಾಖಾ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್‌ ತೀರ್ಪು ಹೊರಬೀಳುವ ತನಕ ಬಂಧಿಸದಂತೆ ಪೊಲೀಸರಿಗೆ ಸೂಚಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ