ಆ್ಯಪ್ನಗರ

Pulwama ಎನ್‌ಕೌಂಟರ್: ಮತ್ತೆ ಐವರು ಯೋಧರು ಹುತಾತ್ಮ

ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ, ಸಿಆರ್‌ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ಪಡೆ ಸೋಮವಾರ ನಸುಕಿನಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು.

Vijaya Karnataka Web 18 Feb 2019, 12:56 pm
ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಮೇಲೆ ಎನ್‌ಕೌಂಟರ್‌ ನಡೆಸುತ್ತಿದ್ದ ಓರ್ವ ಮೇಜರ್ ಮತ್ತು ನಾಲ್ವರು ಯೋಧರು ಗುಂಡೇಟಿಗೆ ತುತ್ತಾಗಿ ಹುತಾತ್ಮರಾಗಿದ್ದಾರೆ.

ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ, ಸಿಆರ್‌ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ಪಡೆ ಸೋಮವಾರ ನಸುಕಿನಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು.

ಈ ಸಂದರ್ಭ ಮೂವರು ಉಗ್ರರು ಮನೆಯೊಂದರಲ್ಲಿ ಅಡಗಿದ್ದು, ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮನೆಯೊಳಗಿದ್ದ ದಂಪತಿ ಕೂಡ ದಾಳಿಗೆ ಬಲಿಯಾಗಿದ್ದು, ಮನೆಯ ಮಾಲೀಕರು ಎನ್ನಲಾಗಿದೆ.

ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೇಜರ್ ಎಂ ಎಸ್ ದೊಂಡಿಯಾಲ್, ಹೆಡ್‌ ಕಾನ್ಸ್‌ಟೆಬಲ್ ಸೇವ್ ರಾಮ್ ಮತ್ತು ಸಿಪಾಯಿಗಳಾದ ಅಜಯ್ ಕುಮಾರ್ ಮತ್ತು ಹರಿ ಸಿಂಗ್ ಹುತಾತ್ಮರಾಗಿದ್ದಾರೆ. ಗುಂಡೇಟಿನಲ್ಲಿ ಗಾಯಗೊಂಡಿದ್ದ ಸಿಪಾಯಿ ಗುಲ್ಜಾರ್ ಮಹಮ್ಮದ್ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದಾರೆ.

ಪುಲ್ವಾಮದ ಪಿಂಗ್ಳನ್ ಪ್ರದೇಶದಲ್ಲಿ ಕನಿಷ್ಠ ಮೂವರು ಉಗ್ರರು ಅಡಗಿಕೊಂಡಿರುವ ಮಾಹಿತಿಯಿದ್ದು, ಅವರಿಗಾಗಿ ಪತ್ತೆ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಕಳೆದ ಗುರುವಾರ ನಡೆದ ಭೀಕರ ಉಗ್ರದಾಳಿಗೆ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿರುವ ಬೆನ್ನಲ್ಲೇ ಮತ್ತೊಂದು ಉಗ್ರದಾಳಿ ಆತಂಕ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ