ಆ್ಯಪ್ನಗರ

ರಾಜಸ್ಥಾನದ ಪ್ರತಿ ಮನೆಯೂ ಬಿಜೆಪಿಯನ್ಜು ದ್ವೇಷಿಸುತ್ತದೆ: ಅಶೋಕ್ ಗೆಹ್ಲೋಟ್ ಕಿಡಿ!

ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ ಎಂದಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜಸ್ಥಾನ ಪ್ರತಿ ಮನೆಯೂ ಬಿಜೆಪಿಯನ್ನು ದ್ವೇಷಿಸುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Vijaya Karnataka Web 10 Aug 2020, 1:13 pm
ಜೈಪುರ್: ಜನರಿಂದ ಪ್ರಜಾಪ್ರಭುತ್ವ ಮಾರ್ಗದಲ್ಲಿ ಆಯ್ಕೆಯಾಗಿರುವ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು, ಬಿಜೆಪಿ ಅನ್ಯಾಯದ ಮಾರ್ಗದಲ್ಲಿ ಉರುಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಪಾದಿಸಿದ್ದಾರೆ.
Vijaya Karnataka Web Ashok Gehlot
ಸಂಗ್ರಹ ಚಿತ್ರ


ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ ಎಂದಿರುವ ಅಶೋಕ್ ಗೆಹ್ಲೋಟ್, ರಾಜಸ್ಥಾನ ಪ್ರತಿ ಮನೆಯೂ ಬಿಜೆಪಿಯನ್ನು ದ್ವೇಷಿಸುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

'ಸತ್ಯದ ಪರ ನಿಂತು ಪ್ರಜಾಪ್ರಭುತ್ವ ಉಳಿಸಿ': ಶಾಸಕರಿಗೆ ಅಶೋಕ್‌ ಗೆಹ್ಲೋಟ್‌ ಬಹಿರಂಗ ಪತ್ರ

ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿರುವ ಬಿಜೆಪಿಯ ಪ್ರಯತ್ನಗಳನ್ನು ರಾಜ್ಯದ ಪ್ರತಿಯೊಂದೂ ಮನೆಯೂ ವಿರೋಧಿಸುತ್ತದೆ. ಈ ಕಾರಣಕ್ಕಾಗಿಯೇ ರಾಜ್ಯದ ಜನ ಬಿಜೆಪಿಯನ್ನು ದ್ವೇಷಿಸುತ್ತಾರೆ ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜ್ಯ ಸರ್ಕಾರವನ್ನು ಉರುಳಿಸಲು ಸಚಿನ್ ಪೈಲಟ್ ಅವರ ಅಸಮಾಧಾನವನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಪೈಲಟ್ ಬಣದವರನ್ನು ಮುಂದಿಟ್ಟುಕೊಂಡು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಗೆಹ್ಲೋಟ್ ಹರಿಹಾಯ್ದರು.

ಆ. 14 ಕ್ಕೆ ರಾಜಸ್ಥಾನ ವಿಧಾನಸಭೆ ಅಧಿವೇಶನ, ಅಳಿವು ಉಳಿವಿನ ಅಂಚಿನಲ್ಲಿ ಕಾಂಗ್ರೆಸ್ ಸರಕಾರ

ಇದೇ ವೇಳೆ ಪಕ್ಷಕ್ಕೆ ದ್ರೋಹ ಬಗೆದು ವಿರೋಧಿ ಪಾಳೆಯ ಸೇರಿಕೊಂಡಿರುವ ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿಗ ಶಾಸಕರ ವಿರುದ್ಧವೂ ಜನರಲ್ಲಿ ಆಕ್ರೋಶ ಮಡುಗಟ್ಟಿದ್ದು, ಬಂಡಾಯ ಶಾಸಕರು ಇದನ್ನು ಅರ್ಥ ಮಾಡಿಕೊಂಡು ವಾಪಸ್ ಬರುತ್ತಾರೆ ಎಂಬ ಭರವಸೆ ಇದೆ ಎಂದು ಗೆಹ್ಲೋಟ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ