ಆ್ಯಪ್ನಗರ

ಯಾವುದೇ ಪಕ್ಷ ಸೇರಲು ಪ್ರತಿಯೊಬ್ಬರು ಸ್ವತಂತ್ರರು..! ಸಿಂಧಿಯಾ ಬೆಂಬಲಕ್ಕೆ ನಿಂತ ಸಚಿನ್‌ ಪೈಲಟ್‌

ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಬೆಂಬಲಕ್ಕೆ ಮಧ್ಯಪ್ರದೇಶದ ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ನಿಂತಿದ್ದು, ಪ್ರತಿಯೊಬ್ಬರಿಗೂ ಯಾವುದೇ ಪಕ್ಷ ಸೇರುವ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.

ANI 28 Oct 2020, 7:27 pm
ಗ್ವಾಲಿಯರ್‌: ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬೆಂಬಲಿಸುವ ಪ್ರವೃತ್ತಿಯನ್ನು ಮಧ್ಯಪ್ರದೇಶದ ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಮುಂದುವರೆಸಿದ್ದಾರೆ. ಪ್ರತಿಯೊಬ್ಬರಿಗೂ ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಲು ಸ್ವತಂತ್ರವಿರುತ್ತದೆ. ಅಂತಿಮವಾಗಿ ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.
Vijaya Karnataka Web everyone is free to decide which party they want to join sachin pilot on scindia being termed as gaddar
ಯಾವುದೇ ಪಕ್ಷ ಸೇರಲು ಪ್ರತಿಯೊಬ್ಬರು ಸ್ವತಂತ್ರರು..! ಸಿಂಧಿಯಾ ಬೆಂಬಲಕ್ಕೆ ನಿಂತ ಸಚಿನ್‌ ಪೈಲಟ್‌


ಗ್ವಾಲಿಯರ್‌ನಲ್ಲಿ ಬುಧವಾರ ಮಾತನಾಡಿದ ಅವರು, ಇಲ್ಲಿ ರಚನೆಯಾದ ಸರಕಾರಕ್ಕೆ ಸಾರ್ವಜನಿಕರು ಮತ ಚಲಾಯಿಸಿದ್ದಾರೆ. ಈಗ ಶಿವರಾಜ್‌ ಸಿಂಗ್‌ ಚೌಹಾಣ್ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಸಾರ್ವಜನಿಕರು ಇದನ್ನು ಒಪ್ಪುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿರುವ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಬಲ ಸ್ಥಾನ ಹೊಂದಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಜ್ಯೋತಿರಾಧಿತ್ಯ ಸಿಂದಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ನಮ್ಮ ಅಭ್ಯರ್ಥಿಗಳು ಭಾರೀ ಬಹುಮತದೊಂದಿಗೆ ಗೆಲ್ಲುತ್ತಾರೆ. ಸಾರ್ವಜನಿಕರು ತಮ್ಮ ಪ್ರತಿನಿಧಿಯ ಪ್ರತಿಯೊಂದು ನಡೆಯನ್ನು ವೀಕ್ಷಿಸುತ್ತಾರೆ. ಮಧ್ಯಪ್ರದೇಶದಲ್ಲಿ ಮಾತ್ರವಲ್ಲದೇ ಬಿಹಾರ ಸೇರಿ ಇತರ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಅವರು ಹೇಳಿದ್ದಾರೆ.

ಕಮಲ್ ನಾಥ್ ವಿರುದ್ಧ ಕ್ರಮ ಕೈಗೊಳ್ಳದ ಸೋನಿಯಾ ಗಾಂಧಿ: ಸಿಂಧಿಯಾ ಕಿಡಿ!

25 ಶಾಸಕರ ರಾಜೀನಾಮೆ ಹಾಗೂ ಮೂವರು ಶಾಸಕರ ಸಾವಿನ ನಂತರ 28 ಕ್ಷೇತ್ರಗಳಲ್ಲಿ ಉಪಚುನಾವಣೆ ನವೆಂಬರ್‌ 3ಕ್ಕೆ ಉಪಚುನಾವಣೆ ನಡೆಯಲಿದೆ.‌ ನವೆಂಬರ್ 10ಕ್ಕೆ ಫಲಿತಾಂಶ ಹೊರಬೀಳಲಿದೆ. 230 ಸದಸ್ಯರ ವಿಧಾನಸಭೆಯಲ್ಲಿ ಪ್ರಸ್ತುತ ಬಿಜೆಪಿಯ 107 ಶಾಸಕರು ಮತ್ತು ಕಾಂಗ್ರೆಸ್‌ನ 88 ಮಂದಿ ಶಾಸಕರಿದ್ದಾರೆ. 4 ಸ್ವತಂತ್ರ ಶಾಸಕರು, ಬಿಎಸ್‌ಪಿಯಿಂದ ಇಬ್ಬರು ಮತ್ತು ಸಮಾಜವಾದಿ ಪಕ್ಷದ ಓರ್ವ ಶಾಸಕರು ಇದ್ದಾರೆ.

ಕಮಲ್‌ನಾಥ್‌, ದಿಗ್ವಿಜಯ್ ಅತಿ ದೊಡ್ಡ‌ ದೇಶದ್ರೋಹಿಗಳು - ಸಿಂಧಿಯಾ ಆಕ್ರೋಶ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ