ಆ್ಯಪ್ನಗರ

ದೇಶದ ಆರ್ಥಿಕ ಕುಸಿತಕ್ಕೆ ಪಿ ಚಿದಂಬರಂ ಕಾರಣವೆಂದು ಆರೋಪಿಸಿ ಐಎಎಫ್ ಮಾಜಿ ಅಧಿಕಾರಿ ಆತ್ಮಹತ್ಯೆ

ದೇಶದ ಆರ್ಥಿಕ ಹಿನ್ನೆಡೆಗೆ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಭಾರತೀಯ ವಾಯುಸೇನೆಯ ಮಾಜಿ ಅಧಿಕಾರಿಯೊಬ್ಬರು ಸಾವಿಗೆ ಶರಣಾಗಿದ್ದಾರೆ.

Times Now 9 Sep 2019, 8:38 pm
ಹೊಸದಿಲ್ಲಿ: ತನ್ನ ಕುಟುಂಬ ಹಾಗೂ ದೇಶದ ಆರ್ಥಿಕ ಹಿನ್ನೆಡೆಗೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಕಾರಣವೆಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
Vijaya Karnataka Web hang


ಅಸ್ಸಾಂ ರಾಜ್ಯದ ಮಂಗಲ್ಡೋಯ್ ಮೂಲದ ಬಿಜಾನ್ ದಾಸ್ ಎಂಬವರು ಉತ್ತರ ಪ್ರದೇಶದ ಪ್ರಯಾಗರಾಜ್ ಹೋಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ 4 ಪುಟಗಳ ಪತ್ರ ಬರೆದ ಅವರು, ಸದ್ಯ ದೇಶದ ಆರ್ಥಿಕ ಹಿನ್ನೆಡೆಗೆ ಈ ಹಿಂದಿನ ಕಾಂಗ್ರೆಸ್ ಸರಕಾರ ಹಾಗೂ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಕಾರಣ ಎಂದು ಆರೋಪಿಸಿದ್ದಾರೆ.

'ಇಂದಿನ ಆರ್ಥಿಕ ಹಿನ್ನೆಡೆಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ನಡೆದ ಹಗರಣ, ಭ್ರಷ್ಟಾಚಾರ ಹಾಗೂ ಅಂದಿನ ಹಣಕಾಸು ಸಚಿವ ಪಿ. ಚಿದಂಬರಂ ತೆಗೆದುಕೊಂಡ ನೀತಿಗಳೇ ಕಾರಣ' ಎಂದು ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೆ ಅಲ್ಲದೆ, ಹೋಟೆಲ್ ಬಿಲ್ ಪಾವತಿ ಹಾಗೂ ತಮ್ಮ ಅಂತ್ಯಕ್ರಿಯೆಗಾಗಿ ಆತ್ಮಹತ್ಯೆ ಪತ್ರದ ಜತೆ ಸ್ವಲ್ಪ ಹಣವನ್ನು ಇಟ್ಟು ಬಿಜಾನ್ ದಾಸ್ ಸಾವಿಗೆ ಶರಣಾಗಿದ್ದಾರೆ.

ಸೆಪ್ಟೆಂಬರ್ 6 ರಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ಹೋಟೆಲ್‌ನಲ್ಲಿ ತಂಗಿದ್ದ ದಾಸ್, ಭಾನುವಾರ ಕೊಠಡಿಯಿಂದ ಹೊರ ಬಂದಿರಲಿಲ್ಲ. ಹೀಗಾಗಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ನೋಡಿದಾಗ ಅವರು ಸಾವಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ