ಆ್ಯಪ್ನಗರ

ಮೋದಿ ಸರಕಾರದ ವೈಫಲ್ಯ ಜನರಿಗೆ ತಲುಪಿಸಲು ರಾಹುಲ್‌ ಸೂಚನೆ

ಚುನಾವಣೆ ಸನ್ನದ್ಧತೆ ಕುರಿತು ರಾಜ್ಯ ಘಟಕಗಳ ಮುಖ್ಯಸ್ಥರ ಜತೆ ಶನಿವಾರ ಸಭೆ ನಡೆಸಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ಹೊಸ ರಣತಂತ್ರದೊಂದಿಗೆ ಚುನಾವಣೆಗೆ ಸಿದ್ಧರಾಗಬೇಕು ಎಂದು ಸೂಚಿಸಿದರು.

Vijaya Karnataka 10 Feb 2019, 5:00 am
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಮುನ್ನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಪ್ರತಿ ವೈಫಲ್ಯದ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಚುನಾವಣೆ ಸನ್ನದ್ಧತೆ ಕುರಿತು ರಾಜ್ಯ ಘಟಕಗಳ ಮುಖ್ಯಸ್ಥರ ಜತೆ ಶನಿವಾರ ಸಭೆ ನಡೆಸಿದ ಅವರು, ಹೊಸ ರಣತಂತ್ರದೊಂದಿಗೆ ಚುನಾವಣೆಗೆ ಸಿದ್ಧರಾಗಬೇಕು ಎಂದು ಸೂಚಿಸಿದರು.
Vijaya Karnataka Web raaga


''ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾವು ಅನೇಕ ವಿಷಯಗಳ ಕುರಿತು ಚರ್ಚೆ ಮಾಡಿದ್ದೇವೆ. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ, ಕೃಷಿ ಬಿಕ್ಕಟ್ಟು ಉಲ್ಬಣಿಸಿದೆ, ಸಂವಿಧಾನಿಕ ಸಂಸ್ಥೆಗಳ ಅಧಿಕಾರ ಮೊಟಕು ಹಾಗೂ ತನಿಖಾ ಸಂಸ್ಥೆಗಳ ದುರ್ಬಳಕೆ ಎಗ್ಗಿಲ್ಲದೆ ನಡೆದಿದೆ. ಈ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವ ಅಗತ್ಯ ಇದೆ,'' ಎಂದು ರಾಹುಲ್‌ ಸಭೆ ಬಳಿಕ ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ