ಆ್ಯಪ್ನಗರ

ಶಬರಿ'ಮಲೆ'ಯಲ್ಲೇ ವಿಶ್ರಾಂತಿ ಪಡೆದ ಪೊಲೀಸರು!

ಅನ್ನ ನೀರಿಲ್ಲದೆ ಬಳಲಿದ ಪೊಲೀಸರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣ, ಕಾಡಿನ ದಾರಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಫೋಟೋ ಇದೀಗ ವೈರಲ್‌ ಆಗಿದೆ.

Samayam Malayalam 22 Oct 2018, 8:20 pm
Vijaya Karnataka Web shabarimala
[This story originally published in samayam malayalam oct 22, 2018]

ಶಬರಿಮಲೆ: ದೇವಾಲಯ ಭಕ್ತರನ್ನು ನಿಯಂತ್ರಿಸಿದ ಪೊಲೀಸರ ಪಾಡು ಏನಾಗಿದೆ? ಯಾರೂ ಕೇಳಿಲ್ಲ. ಆದರೆ ಸಾಮಾಜಿಕ ತಾಣಗಳಲ್ಲಿ ಪೊಲೀಸರ ಒಂದು ಪೋಸ್ಟ್‌ ಇದೀಗ ವೈರಲ್‌ ಆಗಿದೆ.

ಕಾಡಿನ ದಾರಿಯಲ್ಲಿ ಪೊಲೀಸರು ಎಲ್ಲೆಂದರಲ್ಲಿ ಮಲಗಿರುವ ಫೋಟೋಗಳು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

ಎಲ್ಲ ವಯಸ್ಸಿನ ಮಹಿಳೆಯರಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಅಯ್ಯಪ್ಪ ಭಕ್ತರು ತೀವ್ರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಕಳೆದ ನಾಲ್ಕೈದು ದಿನಗಳಿಂದ ಭಕ್ತರ ನಿಯಂತ್ರಿಸುವುದು, ಮಹಿಳಾ ಭಕ್ತರ ಪ್ರವೇಶಕ್ಕೆ ಅನುವು ಮಾಡುವುದು ಸೇರಿದಂತೆ ಭದ್ರತಾ ಕಾರ್ಯಕ್ಕೆ ನಿಯೋಜಿತಗೊಂಡಿದ್ದ ಪೊಲೀಸರು ಆಹಾರ ನೀರು ಬಿಟ್ಟು ಕರ್ತವ್ಯದಲ್ಲಿ ತೊಡಗಿದ್ದಾರೆ. ಇದೀಗ ದೇವಾಲಯದ ಬಾಗಿಲು ಮುಚ್ಚಿದ ಹಿನ್ನೆಲೆಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ಜಾಗದಲ್ಲೇ ವಿಶ್ರಾಂತಿ ತೆಗೆದುಕೊಂಡಿದ್ದಾರೆ.

ಮಹಿಳೆಯರ ಪ್ರವೇಶಕ್ಕೆ ಅಯ್ಯಪ್ಪ ಭಕ್ತರಿಂದ ತೀವ್ರ ವಿರೋಧವನ್ನು ಎದುರಿಸಿದ ಪೊಲೀಸರು, ಲಾಠಿ ಬೀಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ದೇವಾಲಯ ಪ್ರವೇಶಕ್ಕೆ ಮುಂದಾಗಿದ್ದ ಮಹಿಳೆಯರನ್ನು ಸುರಕ್ಷತೆಗೆ ತಮ್ಮ ಜೀವವನ್ನೇ ಮುಡಿಪಾಗಿಟ್ಟಿದ್ದರು. ಈ ಎಲ್ಲ ಜಂಜಾಟದ ಬಳಿಕ ಇದೀಗ ಕಾಡ ದಾರಿನ ನಡುವೆ ವಿಶ್ರಾಂತಿ ಪಡೆಯುತ್ತಿರುವ ಪೊಲೀಸರ ಫೋಟೋಗಳು ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿವೆ. ಈ ಚಿತ್ರಗಳನ್ನು ಶೈಜಿಮೊನ್‌ ಕೆಕೆ ಎಂಬ ಪೊಲೀಸ್‌ ಅಧಿಕಾರಿಯೋರ್ವರು ಶೇರ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ