ಆ್ಯಪ್ನಗರ

ನಿಧನ ಹೊಂದಿ ವರ್ಷದ ಬಳಿಕ ತೆಲಗಿ ಖುಲಾಸೆ

ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ. 30 ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ತೆಲಗಿ ಅನಾರೋಗ್ಯಕ್ಕೆ ಒಳಗಾಗಿ ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಮೃತಪಟ್ಟ. ಮಾಜಿ ಟ್ರಾವೆಲ್‌ ಏಜೆಂಟ್‌ ಆಗಿದ್ದ ತೆಲಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನಕಲಿ ಛಾಪಾ ಕಾಗದದ ದಂಧೆ ನಡೆಸಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ

Vijaya Karnataka 1 Jan 2019, 5:00 am
ನಾಸಿಕ್‌: ದೇಶಾದ್ಯಂತ ಸದ್ದು ಮಾಡಿದ್ದ ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ, ಈಗಾಗಲೇ ಮೃತಪಟ್ಟಿರುವ ಅಬ್ದುಲ್‌ ಕರೀಂ ಲಾಲ್‌ ತೆಲಗಿ ಹಾಗೂ ಇತರ ಏಳು ಆರೋಪಿಗಳನ್ನು ಮಹಾರಾಷ್ಟ್ರದ ನಾಸಿಕ್‌ ಸೆಷನ್ಸ್‌ ಕೋರ್ಟ್‌ ಸೋಮವಾರ ಖುಲಾಸೆಗೊಳಿಸಿದೆ. ಪ್ರಬಲ ಸಾಕ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ, ತೆಲಗಿ ನಿಧನ ಹೊಂದಿ ಒಂದು ವರ್ಷದ ಬಳಿಕ ಆತನನ್ನು ಕೇಸ್‌ನಿಂದ ಖುಲಾಸೆಗೊಳಿಸಿದೆ.
Vijaya Karnataka Web telagi


ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ. 30 ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ತೆಲಗಿ ಅನಾರೋಗ್ಯಕ್ಕೆ ಒಳಗಾಗಿ ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಮೃತಪಟ್ಟ. ಮಾಜಿ ಟ್ರಾವೆಲ್‌ ಏಜೆಂಟ್‌ ಆಗಿದ್ದ ತೆಲಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನಕಲಿ ಛಾಪಾ ಕಾಗದದ ದಂಧೆ ನಡೆಸಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ. ಕರ್ನಾಟಕ ಪೊಲೀಸರು 2001ರಲ್ಲಿ ರಾಜಸ್ಥಾನದ ಅಜ್ಮೇರ್‌ನಲ್ಲಿ ತೆಲಗಿಯನ್ನು ಬಂಧಿಸಿ ಕರೆತಂದು ವಿಚಾರಣೆ ನಡೆಸಿದಾಗ, ಹಗರಣದಲ್ಲಿ ಹಲವು ಪೊಲೀಸ್‌ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕೈವಾಡವಿರುವುದು ಕೇಳಿಬಂದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ