ಫೊನಿ ಚಂಡಮಾರುತ: ಪ್ರಧಾನಿ ಮೋದಿ ನೇತೃತ್ವದಲ್ಲಿ ತುರ್ತು ಸಭೆ
ಫೊನಿ ಚಂಡಮಾರುತ ಒಡಿಶಾ ಕರಾವಳಿಗೆ ಗುರುವಾರ ಅಪ್ಪಳಿಸಲಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಕ್ಷಣಾ ಪಡೆಗಳು ತೀವ್ರ ಮುನ್ನೆಚ್ಚರಿಕೆ ಹೊಂದಿವೆ.
Vijaya Karnataka Web 2 May 2019, 7:08 pm
ಹೊಸದಿಲ್ಲಿ: ಫೊನಿ ಚಂಡಮಾರುತದಿಂದ ಎದುರಾಗಬಹುದಾದ ಪರಿಸ್ಥಿತಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಿಗಳೊಂದಿಗೆ ಬೆಳಗ್ಗೆ ತುರ್ತು ಸಭೆ ನಡೆಸಿದರು.
ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿರುವಂತೆ ಹಾಗೂ ನೆರವು ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಂಡಮಾರುತದ ಪರಿಣಾಮ ಹೆಚ್ಚಾಗಿ ಉಂಟಾಗುವ ಸೂಚನೆ ನೀಡಿರುವ ಎಲ್ಲ ರಾಜ್ಯ ಸರಕಾರಗಳೊಂದಿಗೆ ಸಮನ್ವಯದಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ. ಕರಾವಳಿ ಕಾವಲು ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಸಜ್ಜಾಗಿರಿಸಲಾಗಿದೆ.
ಫೊನಿ ಚಂಡಮಾರುತ ಒಡಿಶಾ ಕರಾವಳಿಗೆ ಗುರುವಾರ ಅಪ್ಪಳಿಸಲಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಕ್ಷಣಾ ಪಡೆಗಳು ತೀವ್ರ ಮುನ್ನೆಚ್ಚರಿಕೆ ಹೊಂದಿವೆ.
ಪುರಿ ಜಿಲ್ಲೆಯ ಸತಪಾಡ ಬಳಿ ಅಪ್ಪಳಿಸುವ ಸಾಧ್ಯತೆ ಇದೆ. ಗರಿಷ್ಠ ಗಂಟೆಗೆ 180 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ ಸಾಗುತ್ತಿದೆ.
ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳಗಳಲ್ಲಿ 47 ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ಸನ್ನದ್ಧವಾಗಿಡಲಾಗಿದೆ.
ಭಾರತೀಯ ಕರಾವಳಿ ಪಡೆ ಮತ್ತು ನೌಕಾಪಡೆ ಹಲವು ಹಡಗು ಹಾಗೂ ಹೆಲಿಕಾಪ್ಟರ್ಗಳನ್ನು ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗಳಿಗೆ ಈಗಾಗಲೇ ನಿಯೋಜಿಸಿದೆ. ಮೂರೂ ರಾಜ್ಯಗಳ ಭೂಸೇನೆ ಹಾಗೂ ವಾಯುಸೇನೆ ತುಕಡಿಗಳನ್ನು ಸನ್ನದ್ಧವಾಗಿಡಲಾಗಿದೆ.
ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿರುವಂತೆ ಹಾಗೂ ನೆರವು ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಂಡಮಾರುತದ ಪರಿಣಾಮ ಹೆಚ್ಚಾಗಿ ಉಂಟಾಗುವ ಸೂಚನೆ ನೀಡಿರುವ ಎಲ್ಲ ರಾಜ್ಯ ಸರಕಾರಗಳೊಂದಿಗೆ ಸಮನ್ವಯದಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ. ಕರಾವಳಿ ಕಾವಲು ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಸಜ್ಜಾಗಿರಿಸಲಾಗಿದೆ.
ಫೊನಿ ಚಂಡಮಾರುತ ಒಡಿಶಾ ಕರಾವಳಿಗೆ ಗುರುವಾರ ಅಪ್ಪಳಿಸಲಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಕ್ಷಣಾ ಪಡೆಗಳು ತೀವ್ರ ಮುನ್ನೆಚ್ಚರಿಕೆ ಹೊಂದಿವೆ.
ಪುರಿ ಜಿಲ್ಲೆಯ ಸತಪಾಡ ಬಳಿ ಅಪ್ಪಳಿಸುವ ಸಾಧ್ಯತೆ ಇದೆ. ಗರಿಷ್ಠ ಗಂಟೆಗೆ 180 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ ಸಾಗುತ್ತಿದೆ.
ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳಗಳಲ್ಲಿ 47 ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ಸನ್ನದ್ಧವಾಗಿಡಲಾಗಿದೆ.
ಭಾರತೀಯ ಕರಾವಳಿ ಪಡೆ ಮತ್ತು ನೌಕಾಪಡೆ ಹಲವು ಹಡಗು ಹಾಗೂ ಹೆಲಿಕಾಪ್ಟರ್ಗಳನ್ನು ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗಳಿಗೆ ಈಗಾಗಲೇ ನಿಯೋಜಿಸಿದೆ. ಮೂರೂ ರಾಜ್ಯಗಳ ಭೂಸೇನೆ ಹಾಗೂ ವಾಯುಸೇನೆ ತುಕಡಿಗಳನ್ನು ಸನ್ನದ್ಧವಾಗಿಡಲಾಗಿದೆ.