ಆ್ಯಪ್ನಗರ

ಫೊನಿ ಚಂಡಮಾರುತ: 180 ಕಿಮೀ ವೇಗದಲ್ಲಿ ಶುಕ್ರವಾರ ಒಡಿಶಾಕ್ಕೆ ಅಪ್ಪಳಿಸುವ ಸಾಧ್ಯತೆ

ಪಶ್ಚಿಮ ಬಂಗಾಳದ, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲೂ ಚಂಡಮಾರುತದ ಪರಿಣಾಮ ಉಂಟಾಗಲಿದೆ.

Vijaya Karnataka Web 2 May 2019, 9:56 pm
ಹೊಸದಿಲ್ಲಿ: ಫೊನಿ ಚಂಡಮಾರುತ ಶುಕ್ರವಾರ ಮಧ್ಯಾಹ್ನದ ವೇಳೆಗೆ ಒಡಿಶಾದ ದಕ್ಷಿಣ ಕರಾವಳಿಯ ಪುರಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು, ಗಂಟೆಗೆ 180 ಕಿಲೋ ಮೀಟರ್ ವೇಗದಲ್ಲಿ ಸಾಗುತ್ತಿದೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.
Vijaya Karnataka Web ಮಳೆ ನಕ್ಷೆ
ಮಳೆ ನಕ್ಷೆ


ಚಂಡಮಾರುತದಿಂದಾಗಿ ಒಡಿಶಾದ ಕರಾವಳಿ ಜಿಲ್ಲೆಗಳಾದ ಗಂಜಾಂ, ಗಜಪತಿ, ಖುರ್ದಾ, ಪುರಿ ಮತ್ತು ಜಗತ್‌ಸಿಂಗ್‌ಪುರ್, ಕೇಂದ್ರಪಾದ, ಭದ್ರಾಕ್, ಜಾಜ್‌ಪುರ್ ಹಾಗೂ ಬಾಲಾಸೊರ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಪಶ್ಚಿಮ ಬಂಗಾಳದ, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲೂ ಚಂಡಮಾರುತದ ಪರಿಣಾಮ ಉಂಟಾಗಲಿದೆ.

ಈ ಸಂಬಂಧ ರಾಜ್ಯ ಸರಕಾರಗಳಿಗೆ ಹಾಗೂ ಕೇಂದ್ರದ ಸಂಬಂಧಪಟ್ಟ ಸಂಸ್ಥೆಗಳೊಂದಿಗೆ ಸೂಕ್ತ ನೀಡಲಾಗಿದೆ ಎಂದು ಗೃಹ ಸಚಿವಾಳಯ ತಿಳಿಸಿದೆ.


ಫೊನಿ ಚಂಡಮಾರುತದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರಾಜ್ಯಗಳೊಂದಿಗೆ ನಿಕಟ ಸಂಪರ್ಕದಲ್ಲಿರುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಚಂಡಮಾರುತದ ಅನಾಹುತಗಳನ್ನು ನಿಭಾಯಿಸಲು ಕೈಗೊಂಡಿರುವ ಪೂರ್ವಸಿದ್ಧತಾ ಕಾರ್ಯಗಳ ಬಗ್ಗೆ ಪರಾಮರ್ಶೆ ನಡೆಸಿದರು.


ಚಂಡಮಾರುತದಿಂದ ಉಂಟಾಗಬಹುದಾದ ಅನಾಹುತಗಳಲ್ಲಿ ಸಿಲುಕಿಕೊಂಡ ಜನರ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ನೌಕಾಪಡೆಗಳು ಹಡಗು ಮತ್ತು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿವೆ.

ಸೇನೆ ಹಾಗೂ ವಾಯುಪಡೆಗಳನ್ನು ಸರ್ವಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬಾಧಿತ ರಾಜ್ಯಗಳಿಗೆ ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ಪಡೆ ನಿಯೋಜಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ