ಆ್ಯಪ್ನಗರ

Farmers protest: ದಿಲ್ಲಿ ಪ್ರವೇಶಿಸಲು ಅನ್ನದಾತರಿಗೆ ಅನುಮತಿ, ಶಾಂತಿಯುತ ಪ್ರತಿಭಟನೆಗೆ ಸೂಚನೆ

ರೈತರು ಹೊಸದಿಲ್ಲಿ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಹೊಸದಿಲ್ಲಿಯ ಬುರಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ರೈತರು ಪ್ರವೇಶ ಪಡೆದ ನಂತರ ಪೊಲೀಸರ ಜತೆಯಲ್ಲಿಯೇ ಮೆರವಣಿಗೆ ಸಾಗಬೇಕು ಎಂದು ತಿಳಿಸಲಾಗಿದೆ.

Vijaya Karnataka Web 27 Nov 2020, 3:57 pm
ಹೊಸದಿಲ್ಲಿ: ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಸರಕಾರ, ಈಗ ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಪ್ರವೇಶಿಸಲು ಅನುಮತಿ ನೀಡಿದೆ.
Vijaya Karnataka Web ದಿಲ್ಲಿಗೆ ರೈತರ ಎಂಟ್ರಿ
ದಿಲ್ಲಿಗೆ ರೈತರ ಎಂಟ್ರಿ


ಕೇಂದ್ರ ಸರಕಾರ ಇತ್ತೀಚಿಗೆ ಜಾರಿಗೆ ತಂದ ವಿವಿಧ ಕೃಷಿ ಮಸೂದೆ ವಿರೋಧಿಸಿ ಅನ್ನದತರು ದಿಲ್ಲಿ ಚಲೋ ಆಂದೋಲನ ನಡೆಸಿದರು. ಪಂಜಾಬ್, ಹರಿಯಾಣ ಹಾಗೂ ಇತರ ರಾಜ್ಯಗಳ ರೈತರಿಗೆ ರಾಷ್ಟ್ರ ರಾಜಧಾನಿ ಪ್ರವೇಶಿಸಲು ಪ್ರಯತ್ನ ನಡೆಸಿದ್ದಾರೆ.

ರೈತರು ಹೊಸದಿಲ್ಲಿ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಹೊಸದಿಲ್ಲಿಯ ಬುರಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ರೈತರು ಪ್ರವೇಶ ಪಡೆದ ನಂತರ ಪೊಲೀಸರ ಜತೆಯಲ್ಲಿಯೇ ಮೆರವಣಿಗೆ ಸಾಗಬೇಕು ಎಂದು ತಿಳಿಸಲಾಗಿದೆ.

ಹೊಸದಿಲ್ಲಿಯ ಬುರಾರಿ ಎಂಬಲ್ಲಿ ಪ್ರತಿಭಟನೆ ನಡೆಸಲು ಸೂಚಿಸಲಾಗಿದೆ.


ಕೇಂದ್ರ ಸರಕಾರ ಕೂಡಲೇ ರೈತರ ಜತೆಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಆಗ್ರಹಿಸಿದರು.

ಅಲ್ಲದೇ ರೈತರು ಹೊಸದಿಲ್ಲಿಗೆ ಪ್ರವೇಶ ಮಾಡುವುದಕ್ಕೆ ಅವಕಾಶ ನೀಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಕ್ಯಾ.ಅಮರೀಂದರ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮುನ್ನ ದಿಲ್ಲಿ-ಹರಿಯಾಣ ಗಡಿ ಭಾಗದಲ್ಲಿ ರೈತರು ಬ್ಯಾರಿಕೇಡ್‌ಗಳನ್ನು ಕಿತ್ತು ಎಸೆಯಲು ಮುಂದಾದರು. ಈ ಸಂದರ್ಭದಲ್ಲಿ ಉದ್ವಿಗ್ನ ವಾತಾವರಣ ಉಂಟಾಯಿತು. ಆಗ ಪೊಲೀಸರು ಲಘು ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು.

ಈ ನಡುವೆ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲವು ಪರೀಕ್ಷೆಗಳು ರದ್ದಾಗಿವೆ. ಪ್ರತಿಭಟನೆ ಹಾಗೂ ಪರೀಕ್ಷೆ ರದ್ದಾಗಿದ್ದರಿಂಗ ಭಾರಿ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ಕೂಡ ತೋಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ