ಆ್ಯಪ್ನಗರ

ಇಡೀ ದೇಶದ ರೈತರು ಸಂಕಷ್ಟದಲ್ಲಿದ್ದಾರೆ: ರಾಹುಲ್‌ ಗಾಂಧಿ

ದೇಶದೆಲ್ಲೆಡೆ ಮಳೆ ಕೊರಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರೈತರ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

Vijaya Karnataka Web 11 Jul 2019, 9:37 pm
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ರೈತರ ಆತ್ಮಹತ್ಯೆ ವಿಷಯವನ್ನು ಪ್ರಸ್ತಾಪಿಸಿದರು.
Vijaya Karnataka Web ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ


ಕೇರಳದ ವಯನಾಡಿನಲ್ಲಿ ರೈತನೋರ್ವ ಸಾಲದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಡೀ ದೇಶದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.

ರೈತರಿಗೆ ಸಾಲ ವಸೂಲಾತಿ ನೋಟಿಸ್ ನೀಡಿ, ಬೆದರಿಸದಂತೆ ಕೇರಳ ಸರ್ಕಾರ ನೀಡಿರುವ ಮನವಿಯನ್ನು ಪರಿಶೀಲಿಸಲು ರಿಸರ್ವ್ ಬ್ಯಾಂಕ್‌ಗೆ ಕೇಂದ್ರ ಸರಕಾರ ಸೂಚಿಸಬೇಕು. ರೈತರು ಸಂಕಷ್ಟದಿಂದ ಪಾರಾಗುವಂತೆ ಕೇಂದ್ರ ಬಜೆಟ್‌ನಲ್ಲಿ ಯಾವುದೇ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ರಾಹುಲ್ ಗಾಂಧಿ ದೂರಿದರು.

ಇದಕ್ಕೆ ಉತ್ತರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಕಲ್ಯಾಣಕ್ಕೆ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವು ಮುಂದುವರಿಯಲಿವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ