ಆ್ಯಪ್ನಗರ

ಪಂಚರಾಜ್ಯ ಚುನಾವಣೆ ಸೋಲಿನ ನಂತರ ರೈತರ 4.5 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡ್ತಾರಾ ಮೋದಿ?

ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದ ವೇಳೆ ಈ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ 4.5 ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ನಿರ್ಧಾರ ಹೊರ ಬಂದರೆ, ದೇಶದ 26 ಕೋಟಿ ರೈತರು ಋಣಮುಕ್ತರಾಗಲಿದ್ದಾರೆ.

Vijaya Karnataka Web 12 Dec 2018, 8:43 pm
ಹೊಸದಿಲ್ಲಿ: ಪಂಚರಾಜ್ಯಗಳ ಚುನಾವಣೆ ಸೋಲಿನ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಈಗ ಹೊಸ ತಂತ್ರಕ್ಕೆ ಮೊರೆ ಹೋಗಲು ಮುಂದಾಗಿದೆ.
Vijaya Karnataka Web ರೂಪಾಯಿ
ರೂಪಾಯಿ


ಎಲ್ಲವೂ ಅಂದುಕೊಂಡಂತೆ ನಡೆದರೆ ಮೋದಿ ಸರಕಾರ ಈಗ ರೈತರ ಸಾಲಮನ್ನಾ ಮಾಡಲು ಚಿಂತನೆ ನಡೆಸಿದೆ.

ಚುನಾವಣೆ ಸೋಲಿನ ಬರೆಯಿಂದ ಚೇತರಿಸಿಕೊಳ್ಳಲು ಹಾಗೂ ರೈತರ ಅಕ್ಕರೆ ಗಳಿಸಲು ಮೋದಿ ಸರಕಾರ ಈ ಪ್ಲಾನ್‌ಗೆ ಮುಂದಾಗಿದೆ.

ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದ ವೇಳೆ ಈ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಒಂದು ವೇಳೆ 4.5 ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ನಿರ್ಧಾರ ಹೊರ ಬಂದರೆ, ದೇಶದ 26 ಕೋಟಿ ರೈತರು ಋಣಮುಕ್ತರಾಗಲಿದ್ದಾರೆ.

2008ರಲ್ಲಿ ಯುಪಿಎ ಸರಕಾರ ಇದೇ ತಂತ್ರವನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದಿತ್ತು. 72 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ನಿರ್ಧಾರ ಕೈಗೊಳ್ಳಲಾಗಿತ್ತು.

ಈಗ ಮೋದಿ ಸರಕಾರ ಇದೇ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ. ಇದನ್ನು ಹೇಗೆ ಜಾರಿ ಮಾಡಬೇಕು ಎಂಬ ಕುರಿತು ಆರ್ಥಿಕ ತಜ್ಞರ ಜತೆ ಮೋದಿ ಟೀಮ್‌ನ ಪ್ರಮುಖ ಸದಸ್ಯರು ಚರ್ಚೆ ನಡೆಸಲಿದ್ದಾರೆ.

ಬಜೆಟ್‌ನಲ್ಲಿ ಅಥವಾ ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಮುನ್ನ ಈ ನಿರ್ಧಾರವನ್ನು ನರೇಂದ್ರ ಮೋದಿ ಪ್ರಕಟಿಸುವ ಸಾಧ್ಯತೆಗಳು ನಿಚ್ಚಳವಾಗಿವೆ ಎಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ