ಆ್ಯಪ್ನಗರ

ಕೊರೊನಾ ವಿರುದ್ಧದ ಸಮರಕ್ಕೆ ಸುಪ್ರೀಂ ಬಲ, ಪಿಎಂ ಕೇರ್ಸ್‌ಗೆ ಜಡ್ಜ್‌ಗಳಿಂದ ತಲಾ 50 ಸಾವಿರ ರೂ.

ಕೊರೊನಾ ವಿರುದ್ಧ ಭಾರತ ಸಂಘಟಿತ ಹೋರಾಟ ನಡೆಸುತ್ತಿದ್ದು, ಸರಕಾರಕ್ಕೆ ಸಾರ್ವಜನಿಕರ, ಅಧಿಕಾರಿಗಳ, ಜನಪ್ರತಿನಿಧಿಗಳ, ನ್ಯಾಯಾಧೀಶರ ಬೆಂಬಲ ಸಿಕ್ಕಿದೆ. ಪಿಎಂ ಕೇರ್ಸ್‌ ನಿಧಿಗೆ ದೇಶದ ಮೂಲೆ ಮೂಲೆಯಿಂದ ದೇಣಿಗೆ ಹರಿದು ಬರುತ್ತಿದ್ದು, ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ತಲಾ 50,000 ರೂ. ದೇಣಿಗೆ ನೀಡಲು ಮುಂದಾಗಿದ್ದಾರೆ.

Vijaya Karnataka Web 1 Apr 2020, 6:40 pm
ಹೊಸದಿಲ್ಲಿ: ಕೊರೊನಾ ವಿರುದ್ಧದ ಹೋರಾಟಕ್ಕೆ ನೆರವಾಗಲು ಪಿಎಂ ಕೇರ್ಸ್‌ ನಿಧಿಗೆ ದೇಶದ ಮೂಲೆ ಮೂಲೆಯಿಂದ ದೇಣಿಗೆ ಹರಿದು ಬರುತ್ತಿದೆ. ಈಗ, ಸುಪ್ರೀಂ ಕೋರ್ಟ್‌ನ ಎಲ್ಲ ಜಡ್ಜ್‌ಗಳು ತಲಾ 50 ಸಾವಿರ ರೂ. ದೇಣಿಗೆಯನ್ನು ಪಿಎಂ ಕೇರ್ಸ್‌ಗೆ ನೀಡಲು ಮುಂದಾಗಿದ್ದಾರೆ.
Vijaya Karnataka Web Supreme-Court


ಪಿಎಂ ಕೇರ್ಸ್‌ ನಿಧಿಯನ್ನು ಕೊರೊನಾ ವೈರಸ್‌ ಹರಡುವಂತಹ ಯಾವುದೇ ತುರ್ತು ಸಂದರ್ಭಗಳಲ್ಲಿ ಬಳಸಲು ಸ್ಥಾಪಿಸಲಾಗಿದೆ. ಸುಪ್ರೀಂ ಕೋರ್ಟ್‌ ಜಡ್ಜ್‌ಗಳಿಗೂ ಮುಂಚೆ ನ್ಯಾಯಮೂರ್ತಿ ಎನ್‌.ವಿ.ರಮಣ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರಕಾರಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ ಒಂದು ಲಕ್ಷ ರೂ. ನೀಡಿದ್ದರು.

ಇನ್ನು, ಸುಪ್ರೀಂ ಕೋರ್ಟ್‌ನ ನಿವೃತ್ತ ಜಡ್ಜ್‌ ನ್ಯಾಯಮೂರ್ತಿ ದೀಪಕ್‌ ವರ್ಮಾ ಪಿಎಂ ಕೇರ್ಸ್‌ ನಿಧಿಗೆ 51 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ, ಜಮ್ಮು ಮತ್ತು ಕಾಶ್ಮೀರ ಹಾಗೂ ಪಾಟ್ನಾ ಹೈಕೋರ್ಟ್‌ನ ಎಲ್ಲ ನ್ಯಾಯಾಧೀಶರು ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದ್ದರು.

ಕೊರೊನಾ ವಿರುದ್ಧ ಹೋರಾಟಕ್ಕಿಳಿದ ಟಾಟಾ, 1500 ಕೋಟಿ ರೂ. ದೇಣಿಗೆ

ನ್ಯಾಯಾಧೀಶರಷ್ಟೇ ಅಲ್ಲದೇ ಜನಪ್ರತಿನಿಧಿಗಳು ಕೂಡ ಪಿಎಂ ಕೇರ್ಸ್‌ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಇನ್ನು, ಉದ್ಯಮಿಗಳಂತೂ ಕೊರೊನಾ ವಿರುದ್ಧದ ಹೋರಾಟಕ್ಕೆ ಸರಕಾರದೊಂದಿಗೆ ಕೈಜೋಡಿಸಿದ್ದಾರೆ. ಕೊರೊನಾ ವಿರುದ್ಧ ಹೋರಾಟಕ್ಕಾಗಿ ವಿಪ್ರೋ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಜಂಟಿಯಾಗಿ 1,125 ಕೋಟಿ ರೂ.ಗಳನ್ನು ತೆಗೆದಿರಿಸಿದೆ.

ಕೊರೊನಾ ಹೋರಾಟಕ್ಕೆ 1,125 ಕೋಟಿ ರೂ.ನೆರವು ಘೋಷಿಸಿದ ವಿಪ್ರೋ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಶನ್

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ತಮ್ಮ ಒಂದು ವರ್ಷದ ವೇತನವನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದ್ದಾರೆ. ಇದಲ್ಲದೇ ಟಾಟಾ ಗ್ರೂಪ್‌ ಕೊರೊನಾ ವಿರುದ್ಧದ ಸಮರಕ್ಕೆ 1,500 ಕೋಟಿ ರೂ. ನೀಡುವುದಾಗಿ ಘೋಷಿಸಿದೆ.

ಕೊರೊನಾ ನಿಯಂತ್ರಣಕ್ಕೆ ₹2 ಕೋಟಿ ಅನುದಾನ ನೀಡಿದ ಸಂಸದ ರಾಜೀವ್‌ ಚಂದ್ರಶೇಖರ್‌!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ