ಆ್ಯಪ್ನಗರ

ಕೇರಳ ಸಚಿವಾಲಯಕ್ಕೆ ಬೆಂಕಿ, ಅಕ್ರಮ ಚಿನ್ನ ಕಳ್ಳಸಾಗಣೆಗೆ ಕಡತಗಳು ಬೆಂಕಿಗಾಹುತಿ?

ಶಾರ್ಟ್‌ ಸರ್ಕ್ಯೂಟ್‌ನಿಂದ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಆದರೆ ಕಡತಗಳು, ದಾಖಲೆಗಳು, ಕಂಪ್ಯೂಟರ್‌ಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವುದು ತಿಳಿದು ಬಂದಿದೆ.

Agencies 25 Aug 2020, 7:45 pm
ತಿರುವನಂತಪುರಂ: ಕೇರಳ ರಾಜ್ಯ ಸಚಿವಾಲಯದಲ್ಲಿ ಸಂಜೆ 4.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಆದರೆ ಹಲವು ಕಡತಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.
Vijaya Karnataka Web fire


ಮೂಲಗಳ ಪ್ರಕಾರ ಎರಡನೇ ಮಹಡಿಯಲ್ಲಿರುವ ಶಿಷ್ಟಾಚಾರ ವಿಭಾಗದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿತು. ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಇಲಾಖೆಯನ್ನು ಗುರಿಯಾಗಿಸಿಕೊಂಡು ಎನ್‌ಐಎ ತನಿಖೆ ನಡೆಸುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಆದರೆ ಕಡತಗಳು, ದಾಖಲೆಗಳು, ಕಂಪ್ಯೂಟರ್‌ಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಸಾರ್ವಜನಿಕ ಆಡಳಿತ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಪಿ. ಹನಿ ಹೇಳಿದ್ದಾರೆ.

"ಸರಕಾರಿ ಸ್ವಾಮ್ಯದ ವಿಶ್ರಾಂತಿ ಗೃಹಗಳ ಬುಕ್ಕಿಂಗ್‌ ಸಂಬಂಧಿಸಿದ ಕೆಲವು ಕಡತಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಪ್ರಮುಖ ಕಡತಗಳು ಇ-ಫೈಲ್‌ ಫಾರ್ಮ್ಯಾಟ್‌ನಲ್ಲಿದೆ. ಕಂಪ್ಯೂಟರ್‌ ಬೆಂಕಿಯಲ್ಲಿ ಹೊತ್ತಿ ಉರಿದಿದ್ದರೂ ಇದನ್ನು ರಿಕವರಿ ಮಾಡಲು ಅವಕಾಶವಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಹಿಂದೆಯೂ ಇಂಥಹ ಘಟನೆಗಳು ನಡೆದಿವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಅದನ್ನು ಆರಿಸಲು ಯತ್ನಿಸಲಾಯಿತು. ಸದ್ಯಕ್ಕೆ ಯಾವುದೇ ಅಪಾಯ ಇಲ್ಲ,” ಎಂದು ಅವರು ವಿವರಿಸಿದ್ದಾರೆ.

ಆದರೆ ರಾಜ್ಯ ವಿರೋಧ ಪಕ್ಷದ ನಾಯಕ ರಮೇಶ್‌ ಚೆನ್ನಿತ್ತಲ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ