ಆ್ಯಪ್ನಗರ

ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ: ಮತ್ತೆ ಶುರುವಾಯ್ತು ಕಾರ್ಯಾಚರಣೆ!

ಭಾರೀ ಬೆಂಕಿ ಅವಘಡಕ್ಕೆ ತುತ್ತಾಗಿರುವ ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆವರಣದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತೆ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

Vijaya Karnataka Web 21 Jan 2021, 7:44 pm
ಪುಣೆ: ಭಾರೀ ಬೆಂಕಿ ಅವಘಡಕ್ಕೆ ತುತ್ತಾಗಿರುವ ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆವರಣದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತೆ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
Vijaya Karnataka Web Serum Institute
ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಮತ್ತೆ ಬೆಂಕಿ


ಐದು ಕಟ್ಟಡ ಕಾರ್ಮಿಕರನ್ನು ಬಲಿ ಪಡೆದ ಬೆಂಕಿ ಅವಘಢ ಇನ್ನೇನು ಅಂತ್ಯ ಕಂಡಿತು ಎನ್ನುವಷ್ಟರಲ್ಲಿ ಮತ್ತೆ ಬೆಂಕಿಯ ಕೆನ್ನಾಲಿಗೆ ಚಾಚಿಕೊಂಡಿರುವುದು ತೀವ್ರ ಆತಂಕ ಸೃಷ್ಟಿಸಿದೆ.

ಈ ಮೊದಲು ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸಿ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಇದೀಗ ಮತ್ತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸೀರಮ್ ಇನ್ಸ್ಟಿಟ್ಯೂಟ್ ಬೆಂಕಿ ಅವಘಡ: ಐವರು ಕಟ್ಟಡ ಕಾರ್ಮಿಕರ ದುರಂತ ಸಾವು!

ಈ ಮೊದಲು ಬೆಂಕಿ ಕಾಣಿಸಿಕೊಂಡಿದ್ದ ಕಟ್ಟಡದಲ್ಲೇ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಕತ್ತಲಾಗಿರುವ ಕಾರಣಕ್ಕೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.


ಇಂದು(ಜ.21-ಗುರುವಾರ) ಮಧ್ಯಾಹ್ನ ವಿಶೇಷ ಆರ್ಥಿಕ ವಲಯ(SEZ)ದ ಭಾಗವಾಗಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್ 1ರ ಒಳಗಿರುವ ಕಟ್ಟಡ ಮೂರು, ನಾಲ್ಕು ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಪುಣೆ: ಕೊರೊನಾ ಲಸಿಕಾ ತಯಾರಕ ಸೀರಮ್ ಇನ್ಸ್ಟಿಟ್ಯೂಟ್ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ!

ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಐವರು ಕಾರ್ಮಿಕರು ದುರಂತ ಸಾವಿಗೀಡಾಗಿದ್ದು ತಿಳಿದು ಬಂದಿತ್ತು. ಇದೀಗ ಮತ್ತೆ ಅದೇ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಾಲಾ, ಸಂತ್ರಸ್ತ ಕುಟುಂಬ ವರ್ಗದ ದು:ಖದಲ್ಲಿ ಸಂಸ್ಥೆ ಭಾಗಿಯಾಗಿದೆ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ