ಆ್ಯಪ್ನಗರ

ರಾಷ್ಟ್ರ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ; 17 ಮಂದಿ ದುರ್ಮರಣ

ರಾಷ್ಟ್ರ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆಯೇ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, 17 ಮಂದಿ ಮೃತಪಟ್ಟಿದ್ದಾರೆ. ಹೋಟೆಲ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಕೆಲವರು ಕಟ್ಟಡದಿಂದ ಹಾರಿದ್ದಾರೆ ಎಂದು ವರದಿಯಾಗಿದೆ.

TNN 12 Feb 2019, 10:04 am

ಹೈಲೈಟ್ಸ್‌:

  • ದಿಲ್ಲಿಯ ಕರೋಲ್ ಭಾಗ್ ಪ್ರದೇಶದಲ್ಲಿ ಅಗ್ನಿ ಅನಾಹುತ
  • ಹೋಟೆಲ್‌ಗೆ ತಗುಲಿದ ಬೆಂಕಿ; 9 ಮಂದಿ ದುರ್ಮರಣ
  • ಬೆಂಕಿ ಕಂಡು ಕಟ್ಟಡದ ಮೇಲಿನಿಂದಲೇ ಹಾರಿದ ಹಲವರು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಕರೋಲ್‌ಭಾಗ್ ಪ್ರದೇಶದಲ್ಲಿ ಹೋಟೆಲ್‌ವೊಂದರಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, 17 ಜನ ಮೃತಪಟ್ಟಿದ್ದಾರೆ. ಬೆಳಗ್ಗಿನ ಜಾವ 4.35ರ ಸುಮಾರಿಗೆ ಈ ಘಟನೆ ವರದಿಯಾಗಿದ್ದು, ಹೋಟೆಲ್‌ನಿಂದ ಸುಮಾರು 50 ಜನರನ್ನು ರಕ್ಷಿಸಲಾಗಿದ್ದು, ಈ ಪೈಕಿ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಗ್ನಿ ಅನಾಹುತ ಸಂಭವಿಸಿದ್ದನ್ನು ಗಮನಿಸಿದ ಹೋಟೆಲ್‌ನಲ್ಲಿದ್ದ ಕೆಲವರು ಕಟ್ಟಡದ ಮೇಲಿನಿಂದಲೇ ಹಾರಿದ್ದಾರೆ ಎಂದು ಸಹ ವರದಿಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.


ಮಧ್ಯ ದಿಲ್ಲಿಯ ಕರೋಲ್ ಭಾಗ್ ಪ್ರದೇಶದ ಅರ್ಪಿತ್‌ ಹೋಟೆಲ್‌ನಲ್ಲಿ ಬೆಳಗ್ಗಿನ ಜಾವ 4.35ರ ಸುಮಾರಿಗೆ ಈ ಘಟನೆ ವರದಿಯಾಗಿದೆ. ಘಟನೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸುಮಾರು 30 ವಾಹನಗಳು ದೌಡಾಯಿಸಿದ್ದು, ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ಹಿರಿಯ ಅಧಿಕಾರಿಗಳು ಸಹ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.




ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಹೋಟೆಲ್‌ನಿಂದ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಸುಮಾರು 50 ಜನರನ್ನು ಹೊರಕ್ಕೆ ತೆಗೆದಿದ್ದಾರೆ. ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಸುಮಾರು 35 ಜನರು ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ, 9 ಮಂದಿ ಆಸ್ಪತ್ರೆಗೆ ತರುವ ವೇಳೆಯೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಸದ್ಯ, ಆರ್‌ಎಂಎಲ್‌ ಆಸ್ಪತ್ರೆ ವೈದ್ಯರು ಮೃತಪಟ್ಟವರ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಬೆಳಗ್ಗೆ 8 ಗಂಟೆ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದು, ಅಗ್ನಿ ಅನಾಹುತಕ್ಕೆ ಇನ್ನೂ ಸರಿಯಾದ ಕಾರಣ ತಿಳಿದುಬಂದಿಲ್ಲ. ಹೋಟೆಲ್‌ನವರ ತಪ್ಪಿನಿಂದಾಗಿ ಈ ಘಟನೆ ನಡೆದಿದೆಯಾ ಎನ್ನುವ ಬಗ್ಗೆ ದಿಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್‌ ಕಾರಣವಿರಬಹುದೆಂದು ಅನುಮಾನ ವ್ಯಕ್ತಪಡಿಸಲಾಗಿದ್ದು, ಈ ಸಂಬಂಧ ಅಗ್ನಿಶಾಮಕ ದಳ ಸಹ ಪ್ರತ್ಯೇಕ ತನಿಖೆ ನಡೆಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ