ಆ್ಯಪ್ನಗರ

ಕಾರವಾರ ನೌಕಾನೆಲೆ ಬಳಿ ಯುದ್ಧನೌಕೆಯಲ್ಲಿ ಬೆಂಕಿ ಆಕಸ್ಮಿಕ: ನೌಕಾಪಡೆ ಅಧಿಕಾರಿ ಸಾವು

ಐಎನ್‌ಎಸ್ ವಿಕ್ರಮಾದಿತ್ಯ ಕಾರವಾರದ ನೌಕಾನೆಲೆ ಪ್ರವೇಶಿಸುವ ವೇಳೆಗೆ ಈ ದುರಂತ ಸಂಭವಿಸಿದೆ. ಲೆಫ್ಟಿನೆಂಟ್ ಕಮೊಡೋರ್ ಡಿ.ಎಸ್ ಚೌಹಾಣ್ ಅವರು ಬೆಂಕಿ ನಂದಿಸುವ ಯತ್ನದಲ್ಲಿದ್ದಾಗ ಭಾರೀ ಹೊಗೆ ಮತ್ತು ಜ್ವಾಲೆಯಿಂದಾಗಿ ಉಸಿರುಗಟ್ಟಿ ಪ್ರಜ್ಞಾಹೀನರಾದರು. ಕೂಡಲೇ ಅವರನ್ನು ಕಾರವಾರದ ನೌಕಾಪಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚೇತರಿಸಿಕೊಳ್ಳಲಿಲ್ಲ ಎಂದು ನೌಕಾಪಡೆ ಪ್ರಕಟಣೆ ತಿಳಿಸಿದೆ.

Vijaya Karnataka Web 26 Apr 2019, 5:39 pm
ಹೊಸದಿಲ್ಲಿ: ವಿಮಾನವಾಹಕ ಯುದ್ಧನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಇಂದು ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ನೌಕಾಪಡೆ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಐಎನ್‌ಎಸ್ ವಿಕ್ರಮಾದಿತ್ಯ ಕಾರವಾರದ ನೌಕಾನೆಲೆ ಪ್ರವೇಶಿಸುವ ವೇಳೆಗೆ ಈ ದುರಂತ ಸಂಭವಿಸಿದೆ.

ಲೆಫ್ಟಿನೆಂಟ್ ಕಮೊಡೋರ್ ಡಿ.ಎಸ್ ಚೌಹಾಣ್ ಅವರು ಬೆಂಕಿ ನಂದಿಸುವ ಯತ್ನದಲ್ಲಿದ್ದಾಗ ಭಾರೀ ಹೊಗೆ ಮತ್ತು ಜ್ವಾಲೆಯಿಂದಾಗಿ ಉಸಿರುಗಟ್ಟಿ ಪ್ರಜ್ಞಾಹೀನರಾದರು.

ಕೂಡಲೇ ಅವರನ್ನು ಕಾರವಾರದ ನೌಕಾಪಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚೇತರಿಸಿಕೊಳ್ಳಲಿಲ್ಲ ಎಂದು ನೌಕಾಪಡೆ ಪ್ರಕಟಣೆ ತಿಳಿಸಿದೆ.

ಹಡಗಿನಲ್ಲಿದ್ದ ಇತರ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿ ಆಕಸ್ಮಿಕದಿಂದಾಗಿ ಯುದ್ಧನೌಕೆಗೆ ಹೆಚ್ಚಿನ ಹಾನಿಯೇನೂ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.

ಘಟನೆ ಕುರಿತು ಆಂತರಿಕ ತನಿಖೆಗೆ ನೌಕಾಪಡೆ ಆದೇಶಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ