ಆ್ಯಪ್ನಗರ

ಬೆಂಕಿ ಅವಘಡದಿಂದ ಲಸಿಕೆ ತಯಾರಿಕೆ ಪ್ರಕ್ರಿಯೆಗೆ ಅಡ್ಡಿಯಾಗದು: ಸೀರಮ್ ಭರವಸೆ!

ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸೀರಮ್ ಇನ್ಸ್ಟಿಟ್ಯೂಟ್, ಕೋವಿಶೀಲ್ಡ್ ಲಸಿಕೆ ತಯಾರಾಗುತ್ತಿರುವ ಘಟಕಗಳು ಸುರಕ್ಷಿತವಾಗಿದ್ದು, ಲಸಿಕೆಗಳನ್ನು ಸಂಗ್ರಹಿಸಿಟ್ಟಿರುವ ಉಗ್ರಾಣಗಳೂ ಸುರಕ್ಷಿತವಾಗಿವೆ ಎಂದು ಸ್ಪಷ್ಟಪಡಿಸಿದೆ. ಕೊರೊನಾ ಲಸಿಕೆ ತಯಾರಿಕೆ ಹಾಗೂ ವಿತರಣೆ ಪ್ರಕ್ರಿಯೆಗೆ ಇದರಿಂದ ಯಾವುದೇ ತೊಂದರೆಯಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

Vijaya Karnataka Web 21 Jan 2021, 4:19 pm
ಪುಣೆ: ದೇಶದಲ್ಲಿ ಕೋವಿಶೀಲ್ಡ್ ಕೊರೊನಾ ಲಸಿಕೆ ವಿತರಕ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್‌ನ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದೆ.
Vijaya Karnataka Web Serum Institute
ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಗ್ನಿ ಅವಘಡ


ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್ 1ರ ಒಳಗಿರುವ ಕಟ್ಟಡ ಮೂರು, ನಾಲ್ಕು ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೇ ಸೀರಮ್ ಇನ್ಸ್ಟಿಟ್ಯೂಟ್ ಆವರಣಕ್ಕೆ ಪ್ರವೇಶಿಸಿರುವ ಅಗ್ನಿಶಾಮಕ ದಳ, ಬೆಂಕಿ ನಂದಿಸುವ ಕಾರ್ಯುದಲ್ಲಿ ನಿರತವಾಗಿದೆ.

ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೀರಮ್ ಇನ್ಸ್ಟಿಟ್ಯೂಟ್, ವಿಶೇಷ ಆರ್ಥಿಕ ವಲಯ(SEZ)ದ ಭಾಗವಾಗಿದ್ದ ನೂತನ ಕಟ್ಟಡದ ಕೆಲವು ಮಹಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋವಿಶೀಲ್ಡ್ ಲಸಿಕೆ ತಯಾರಾಗುತ್ತಿರುವ ಘಟಕಗಳು ಸುರಕ್ಷಿತವಾಗಿದ್ದು, ಲಸಿಕೆಗಳನ್ನು ಸಂಗ್ರಹಿಸಿಟ್ಟಿರುವ ಉಗ್ರಾಣಗಳೂ ಸುರಕ್ಷಿತವಾಗಿವೆ ಎಂದು ಸ್ಪಷ್ಟಪಡಿಸಿದೆ.

ಪುಣೆ: ಕೊರೊನಾ ಲಸಿಕಾ ತಯಾರಕ ಸೀರಮ್ ಇನ್ಸ್ಟಿಟ್ಯೂಟ್ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ!

ಕೊರೊನಾ ಲಸಿಕೆ ತಯಾರಿಕೆ ಹಾಗೂ ವಿತರಣೆ ಪ್ರಕ್ರಿಯೆಗೆ ಇದರಿಂದ ಯಾವುದೇ ತೊಂದರೆಯಿಲ್ಲ. ಲಸಿಕೆ ತಯಾರಿಕೆ ಘಟಕಗಳನ್ಉ ಸುರಕ್ಷಿತವಾಗಿವೆ ಎಂದು ಸಂಸ್ಥೆ ಹೇಳಿದೆ.

ಬೆಂಕಿ ಅವಘಡದಿಂದ ಲಸಿಕೆ ಉತ್ಪದನೆ ಹಾಗೂ ಹಂಚಿಕೆ ಮೇಲೆ ಪರಿಣಾಮ ಬೀರದು. ನಾವು ಸದ್ಯ ಕಟ್ಟಡದಲ್ಲಿ ಸಿಲುಕಿರಬಹುದಾದ ನಮ್ಮ ಸಿಬ್ಬಂದಿಯ ರಕ್ಷಣೆಯತ್ತ ಗಮನಹರಿಸಿದ್ದೇವೆ ಎಂದು ಸೀರಮ್ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇನ್ನು ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಸಂಭವಿಸಿರುವ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ವೇಗ ನೀಡುವಂತೆ ಆದೇಶ ನೀಡಿರುವ ಉದ್ಧವ್ ಠಾಕ್ರೆ, ಸಿಬ್ಬಂದಿ ರಕ್ಷಣೆಗೆ ಒತ್ತು ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಲಸಿಕೆ ತೆಗೆದುಕೊಂಡು ಸುರಕ್ಷತೆಯ ಅಭಯ ನೀಡಲಿದ್ದಾರೆ ಪ್ರಧಾನಿ ಮೋದಿ

ಸದ್ಯ ಸ್ಥಳದಲ್ಲಿ 10 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು, ಇದುವರೆಗೂ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ