ಆ್ಯಪ್ನಗರ

ಸರಿ ದಾರಿಯಲ್ಲಿ ಮೊದಲ ಹೆಜ್ಜೆ: ಕೇಂದ್ರದ ಕೊರೊನಾ ಪ್ಯಾಕೇಜ್‌ ಬೆಂಬಲಿಸಿದ ರಾಹುಲ್‌

ಗುರುವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 1.70 ಲಕ್ಷ ಕೋಟಿ ರೂಪಾಯಿಗಳ ಕೊರೊನಾ ಪರಿಹಾರ ಪ್ಯಾಕೇಜ್‌ ಘೋಷಿಸಿದ್ದರು. ಇದನ್ನು ರಾಹುಲ್‌ ಗಾಂಧಿ ಬೆಂಬಲಿಸಿದ್ದಾರೆ.

Agencies 26 Mar 2020, 4:43 pm

ಹೊಸದಿಲ್ಲಿ: ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದ್ದು, ಇದರಿಂದ ತೊಂದರೆಗೀಡಾಗಿರುವವರ ಸಹಾಯಕ್ಕಾಗಿ ಕೇಂದ್ರ ಸರಕಾರ ಗುರುವಾರ ಪರಿಹಾರ ಪ್ಯಾಕೇಜ್‌ ಘೋಷಿಸಿದೆ. ಇದನ್ನು ವಿಪಕ್ಷ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಂಬಲಿಸಿದ್ದಾರೆ. ಇದು 'ಸರಿ ದಾರಿಯಲ್ಲಿ ಮೊದಲ ಹೆಜ್ಜೆ' ಎಂಬುದಾಗಿ ಅವರು ಬಣ್ಣಿಸಿದ್ದಾರೆ.
Vijaya Karnataka Web Congress leader Rahul Gandhi


ಇದಕ್ಕೂ ಮೊದಲು ಅವರ ತಾಯಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಸರಕಾರಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದರು. ಇದೀಗ ರಾಹುಲ್‌ ಗಾಂಧಿ ಕೇಂದ್ರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಸರಕಾರ ಇಂದು ಘೋಷಿಸಿರುವ ಹಣಕಾಸು ನೆರವು ಪ್ಯಾಕೇಜ್‌ ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆಯಾಗಿದೆ. ಲಾಕ್‌ಡೌನ್‌ನಿಂದ ತೊಂದರೆಗೆ ಗುರಿಯಾಗಿರುವ ರೈತರು, ಕಾರ್ಮಿಕರು, ದಿನಗೂಲಿ ನೌಕರರು, ಮಹಿಳೆಯರು ಮತ್ತು ವೃದ್ಧರಿಗೆ ಕೇಂದ್ರ ಸರಕಾರ ಸಾಲವನ್ನು ನೀಡಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ: ಕೇಂದ್ರದಿಂದ 5 ಕೆಜಿ ಅಕ್ಕಿ, 1 ಕೆಜಿ ಬೇಳೆ ಫ್ರೀ; ಜೊತೆಗೆ ಮತ್ತಷ್ಟು ಕೊಡುಗೆ

ಇದಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 1.70 ಲಕ್ಷ ಕೋಟಿ ರೂಪಾಯಿಗಳ ಕೊರೊನಾ ಪರಿಹಾರ ಪ್ಯಾಕೇಜ್‌ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದ್ದರು. ಇದಾಗಿ ಕೇವಲ ಒಂದು ಗಂಟೆಯಲ್ಲಿ ರಾಹುಲ್‌ ಗಾಂಧಿ ಈ ಟ್ಟೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ