ಆ್ಯಪ್ನಗರ

ಕಾಶ್ಮೀರದಲ್ಲಿ ಎನ್‌ಕೌಂಟರ್‌ ಐವರು ಹಿಜ್ಬುಲ್‌ ಉಗ್ರರ ಹತ್ಯೆ

ಉಗ್ರರು ಮನೆಯೊಂದರಲ್ಲಿ ಅಡಗಿರುವ ಮಾಹಿತಿ ಪಡೆದ ಪಡೆಗಳು ಸುತ್ತುವರಿದವು. ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದೆ. ಐವರು ಉಗ್ರರು ಮೃತಪಟ್ಟಿದ್ದಾರೆ.

Vijaya Karnataka 11 Feb 2019, 5:00 am
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಐವರು ಹಿಜ್ಬುಲ್‌ ಮುಜಾಹಿದೀನ್‌ ಉಗ್ರರನ್ನು ಹೊಡೆದುರುಳಿಸಿವೆ. ಕುಲ್ಗಾಮ್‌ ಜಿಲ್ಲೆಯ ಕೆಲ್ಲಂನಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರಲ್ಲಿ ಪಿಎಚ್‌ಡಿ ಪದವೀಧರನಾಗಿದ್ದು, ಹಿಜ್ಬುಲ್‌ ಕಮಾಂಡರ್‌ ಆದ ವಸೀಂ ರಾಥೇರ್‌ ಕೂಡಾ ಸೇರಿದ್ದಾನೆ.
Vijaya Karnataka Web pulwama


ಉಗ್ರರು ಮನೆಯೊಂದರಲ್ಲಿ ಅಡಗಿರುವ ಮಾಹಿತಿ ಪಡೆದ ಪಡೆಗಳು ಸುತ್ತುವರಿದವು. ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದೆ. ಐವರು ಉಗ್ರರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ , ಸ್ಫೋಟಕ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರತಿಭಟನೆ, ಘರ್ಷಣೆ: ಈ ಮಧ್ಯೆ, ಎನ್‌ಕೌಂಟರ್‌ ಖಂಡಿಸಿ ಸ್ಥಳೀಯರು ಭದ್ರತಾ ಪಡೆಗಳು ಮತ್ತು ಪೊಲೀಸರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು. ನಂತರ ಪೊಲೀಸರು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾದರು. ಪ್ರತಿಭಟನೆ ವೇಳೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್‌ನೆಟ್‌ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ