ಆ್ಯಪ್ನಗರ

ನಕ್ಸಲ್‌ ದಾಳಿಗೆ ಐವರು ಪೊಲೀಸರು ಬಲಿ

ಜಾರ್ಖಂಡ್‌ನ ಸರಾಯ್‌ಕೆಲಾ ಖಾರ್ಸಾವಾನ್‌ ಜಿಲ್ಲೆಯ ಕುಕುರು ಪ್ರದೇಶದಲ್ಲಿ ನಕ್ಸಲರು ದಾಳಿ ನಡೆಸಿದ್ದಾರೆ.

PTI 15 Jun 2019, 5:00 am
ರಾಂಚಿ: ಜಾರ್ಖಂಡನ ರಾಜಧಾನಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಪೊಲೀಸರು ಹುತಾತ್ಮರಾಗಿದ್ದಾರೆ. ಜಾರ್ಖಂಡ್‌ನ ಸರಾಯ್‌ಕೆಲಾ ಖಾರ್ಸಾವಾನ್‌ ಜಿಲ್ಲೆಯ ಕುಕುರು ಪ್ರದೇಶದಲ್ಲಿ ನಕ್ಸಲರು ದಾಳಿ ನಡೆಸಿದ್ದಾರೆ. ಇಬ್ಬರು ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಮತ್ತು ಮೂವರು ಪೇದೆಗಳು ಗುಂಡಿಗೆ ಬಲಿಯಾಗಿದ್ದಾರೆ ಎಂದು ಜಮ್‌ಶೆಡ್‌ಪುರ ನಗರ ಪೊಲೀಸ್‌ ವರಿಷ್ಠಾಧಿಕಾರಿ ಪ್ರಭಾತ್‌ ಕುಮಾರ್‌ ತಿಳಿಸಿದ್ದಾರೆ. ಘಟನಾ ಸ್ಥಳದ ಸುತ್ತ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದು, ಪಟ್ಟಣಕ್ಕೆ ಹೊಂದಿಕೊಂಡಿರುವ ಅರಣ್ಯದಲ್ಲಿ ನಕ್ಸಲರ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.
Vijaya Karnataka Web NAXAL (2)


ಕಳೆದ ತಿಂಗಳು ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಬಳಸಿ ನಡೆಸಿದ ದಾಳಿಗೆ 15 ಯೋಧರು ಹಾಗೂ ಒಬ್ಬ ಚಾಲಕ ಮೃತಪಟ್ಟಿದ್ದರು. ಏಪ್ರಿಲ್‌ನಲ್ಲಿ ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲರ ದಾಳಿಗೆ ಬಿಜೆಪಿ ಶಾಸಕ ಭೀಮಾ ಮಾಂಡವಿ ಸಹಿತ ನಾಲ್ವರು ಭದ್ರತಾ ಸಿಬ್ಬಂದಿ ಮೃತರಾಗಿದ್ದರು.

2 ನಕ್ಸಲರ ಹತ್ಯೆ:
ಛತ್ತೀಸ್‌ಗಢದ ನಕ್ಸಲ್‌ಪೀಡಿತ ಕಾಂಕೇರ್‌ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ಕಾಳಗದಲ್ಲಿ ಮಾಲೇಪರಾ ಮತ್ತು ಮುರ್ನಾರ್‌ ಗ್ರಾಮದ ಅರಣ್ಯಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ. ನಕ್ಸಲರ ಶೋಧಕಾರ್ಯದಲ್ಲಿ ನಿರತವಾಗಿದ್ದ ಜಿಲ್ಲಾ ಪೊಲೀಸ್‌ ಮೀಸಲು ಪಡೆ ಮೇಲೆ ಏಕಾಏಕಿ ದಾಳಿ ನಡೆದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಲಾಗಿದೆ ಎಂದು ನಕ್ಸಲ್‌ ನಿಗ್ರಹ ಪಡೆ ಪ್ರಧಾನ ನಿರ್ದೇಶಕ ಗಿರಿಧಾರಿ ನಾಯಕ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ