ಆ್ಯಪ್ನಗರ

ಯೋಗಿ ಬಜೆಟ್, ಗೋಶಾಲೆಗೆ 404 ಕೋಟಿ, ಮದರಸಾಗಳಿಗೆ 490 ಕೋಟಿ!

'ನಮ್ಮ ಸರಕಾರ 450 ಕೋಟಿ ರೂಪಾಯಿ ಹಣವನ್ನು ಗೋಶಾಲೆಗೆ ಮೀಸಲಿಟ್ಟಿದ್ದರೆ, 490 ಕೋಟಿ ರೂಪಾಯಿ ಹಣವನ್ನು ಮದರಸಾಗಳ ಅಭಿವೃದ್ಧಿಗಾಗಿ ವ್ಯಯಿಸುತ್ತಿದೆ' ಎಂದು ಹಣಕಾಸು ಸಚಿವ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

TIMESOFINDIA.COM 9 Feb 2019, 9:58 am
ಲಖನೌ: ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಗಮನ ಹರಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ, ಬಜೆಟ್‌ನಲ್ಲಿ ನಿರ್ದಿಷ್ಟವಾಗಿ ಯಾವುದೇ ವೋಟ್‌ಬ್ಯಾಂಕ್ ಓಲೈಕೆಯನ್ನು ಕೇಂದ್ರೀಕರಿಸಿಲ್ಲ ಎಂದು ಹಣಕಾಸು ಸಚಿವ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.
Vijaya Karnataka Web yogi


ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, 'ನಮ್ಮ ಸರಕಾರ 450 ಕೋಟಿ ರೂಪಾಯಿ ಹಣವನ್ನು ಗೋಶಾಲೆಗೆ ಮೀಸಲಿಟ್ಟಿದ್ದರೆ, 490 ಕೋಟಿ ರೂಪಾಯಿ ಹಣವನ್ನು ಮದರಸಾಗಳ ಅಭಿವೃದ್ಧಿಗಾಗಿ ವ್ಯಯಿಸುತ್ತಿದೆ' ಎಂದು ತಿಳಿಸಿದ್ದಾರೆ.

ಕಳೆದ ಬಾರಿ ಉತ್ತರ ಪ್ರದೇಶ ಸರ್ಕಾರ 4.28 ಲಕ್ಷ ಕೋಟಿ ರೂ. ಮಂಡಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಬಜೆಟ್ ಗಾತ್ರ ಶೇ.12ರಷ್ಟು ಹೆಚ್ಚಿದೆ. ಸತತ ಮೂರನೇ ಬಾರಿಗೆ ತೆರಿಗೆ ಮುಕ್ತ ಬಜೆಟ್ ಮಂಡಿಸಲಾಗಿದೆ. ಈ ಹಿಂದೆ ಆಡಳಿತ ನಡೆಸಿದ್ದ ಮಾಯಾವತಿ ನೇತೃತ್ವದ ಬಿಎಸ್‌ಪಿ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಸರಕಾರಗಳ 3 ಲಕ್ಷ ಕೋಟಿ ಮೀರಿ ಬಜೆಟ್ ಮಂಡಿಸಿಯೇ ಇಲ್ಲ ಎಂದು ಅಗರ್ವಾಲ್ ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ