ಆ್ಯಪ್ನಗರ

ಪರಪ್ಪನ ಅಗ್ರಹಾರದಿಂದ ಹೊರಬರಲಿದ್ದಾರೆ ಶಶಿಕಲಾ ನಟರಾಜನ್, ಕಡೆಗೂ ಬಿಡುಗಡೆ ದಿನಾಂಕ ನಿಗದಿ!

ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ನಟರಾಜನ್ ಇನ್ನು ನಾಲ್ಕು ತಿಂಗಳಲ್ಲಿ ಜೈಲಿಂದ ಬಿಡುಗಡೆಗೊಳ್ಳಲಿದ್ದಾರೆ. ತಮಿಳು ನಾಡಿನಲ್ಲಿ ಒಂದು ವರ್ಷದ ಅವಧಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಕುತೂಹಲ ಕೆರಳಿದೆ.

Vijaya Karnataka Web 15 Sep 2020, 11:02 am
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ ದೋಷಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಬಿಡುಗಡೆಯ ದಿನಾಂಕ ಕೊನೆಗೂ ನಿಗದಿಯಾಗಿದೆ. ಈ ಕುರಿತಾಗಿ ಸಾಕಷ್ಟು ಅಂತೆ ಕಂತೆಗಳು ಹರಿದಾಡುತ್ತಿದ್ದವು. ಆದರೆ ಅಧಿಕೃತ ದಿನಾಂಕ ನಿಗದಿಯಾಗಿರಲಿಲ್ಲ.
Vijaya Karnataka Web sasikala


ಈ ನಿಟ್ಟಿನಲ್ಲಿ ನರಸಿಂಹ ಮೂರ್ತಿ ಎಂಬುವವರು ಆರ್‌ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯಲ್ಲಿ ಶಶಿಕಲಾ ನಟರಾಜನ್ ಬಿಡುಗಡೆಯ ದಿನಾಂಕದ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಜೈಲಾಧಿಕಾರಿಗಳು ಉತ್ತರ ನೀಡಿದ್ದಾರೆ.

ಸದ್ಯಕ್ಕಿಲ್ಲ ಶಶಿಕಲಾ ನಟರಾಜನ್‌ಗೆ ಜೈಲಿಂದ ಬಿಡುಗಡೆ, ಅಂತೆಕಂತೆಗಳಿಗೆ ಬಿತ್ತು ಬ್ರೇಕ್

ಜೈಲಾಧಿಕಾರಿಗಳ ನೀಡಿರುವ ಮಾಹಿತಿಯ ಪ್ರಕಾರ ಶಶಿಕಲಾ ನಟರಾಜನ್ ಜನವರಿ 27, 2021 ರಲ್ಲಿ ಬಿಡುಗಡೆಗೊಳ್ಳಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಕ್ಕೆ ಪಾವತಿಸಬೇಕಾಗಿರುವ ದಂಡ ಪಾವತಿಗೆ ವಿಳಂಬ ಮಾಡಿದರೆ ಅವರು ಬಿಡುಗಡೆ ಅವಧಿ ಮುಂದೂಡಲ್ಪಡಲಿದೆ ಎಂದು ತಿಳಿಸಿದ್ದಾರೆ. ಇನ್ನು ಪೆರೋಲ್ ರಜಾಗಳನ್ನು ಲೆಕ್ಕ ಹಾಕಿದರೆ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯೂ ಹತ್ತಿರವಾಗುತ್ತಿದ್ದು ಈ ನಿಟ್ಟಿನಲ್ಲಿ ಶಶಿಕಲಾ ನಟರಾಜನ್ ಬಿಡುಗಡೆ ಮಹತ್ವ ಪಡೆದುಕೊಂಡಿದೆ.

ವಿ.ಕೆ ಶಶಿಕಲಾ ನಟರಾಜನ್ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. 2017 ರಲ್ಲಿ ಜೈಲು ಶಿಕ್ಷೆಗೆ ಒಳಗಾದ ಅವರ ಶಿಕ್ಷೆಯ ಅವಧಿ ಇನ್ನೂ ಮುಕ್ತಾಯಗೊಂಡಿಲ್ಲ. 66.65 ಕೋಟಿ ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ ಶಶಿಕಲಾ ಹಾಗೂ ಅವರ ಸಂಬಂಧಿ ಇಳವರಸಿ, ಸುಧಾಕರನ್ ಅಪರಾಧಿಗಳೆಂದು ನ್ಯಾಯಮೂರ್ತಿಗಳಾದ ಪಿಸಿ ಘೋಷ್‌ ಹಾಗೂ ಅಮಿತಾವ ರಾಯ್‌ ಅವರಿದ್ದ ವಿಭಾಗೀಯ ಪೀಠ ತೀರ್ಪು ಪ್ರಕಟಗೊಳಿಸಿತ್ತು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ