ಆ್ಯಪ್ನಗರ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಆಗಸ್ಟ್ 9ರಂದು ಜೇಟ್ಲಿ ಏಮ್ಸ್‌ಗೆ ದಾಖಲಾಗಿದ್ದರು.

Navbharat Times 16 Aug 2019, 11:26 am
ಹೊಸದಿಲ್ಲಿ: ಕಳೆದ ಏಳು ದಿನಗಳಿಂದ ಹೊಸದಿಲ್ಲಿಯ ಏಮ್ಸ್‌ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಏಮ್ಸ್‌ನತ್ತ ಧಾವಿಸಿದ್ದಾರೆ.
Vijaya Karnataka Web Jetli



ಏಮ್ಸ್ ವೈದ್ಯರು ಆಗಸ್ಟ್ 9 ರಂದು ಜೇಟ್ಲಿ ಆರೋಗ್ಯ ಸ್ಥಿರವಾಗಿದೆ ಎಂದು ಪ್ರಕಟಣೆ ನೀಡಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ವಿಷಯ ಬಹಿರಂಗವಾಗಿರಿಲಿಲ್ಲ. ಆದರೆ ಮೂಲಗಳ ಪ್ರಕಾರ ಅವರು ಈಗಲೂ ಸಹ ತೀವ್ರ ನಿಗಾ ಘಟಕದಲ್ಲಿದ್ದು ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.

ಮೂಲಗಳ ಪ್ರಕಾರ ಜೇಟ್ಲಿ ಅವರ ಶ್ವಾಸಕೋಶದಲ್ಲಿ ನೀರು ತುಂಬಿದ್ದು , ಈ ಕಾರಣದಿಂದ ಅವರಿಗೆ ಉಸಿರಾಡಲು ಸಮಸ್ಯೆಯಾಗುತ್ತಿದೆ. ಶ್ವಾಸಕೋಶದಿಂದ ನೀರನ್ನು ಹೊರತೆಗೆಯಲಾಗುತ್ತಿದ್ದರೂ, ಮರಳಿ ತುಂಬಿಕೊಳ್ಳುತ್ತಿದೆ. ಹೀಗಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರು Soft tissue sarcoma (ಒಂದು ರೀತಿಯ ಕ್ಯಾನ್ಸರ್) ದಿಂದ ಬಳಲುತ್ತಿದ್ದಾರೆ ಎಂದು ವೈದ್ಯಮೂಲಗಳು ತಿಳಿಸಿವೆ.

ಕಳೆದ ಶುಕ್ರವಾರ ಜೇಟ್ಲಿ ಆರೋಗ್ಯ ಸ್ಥಿರವಾಗಿದೆ ಎಂದು ಬುಲಿಟಿನ್ ಬಿಡುಗಡೆ ಮಾಡಲಾಗಿತ್ತು. ಬಳಿಕ ಏಮ್ಸ್ ಕಡೆಯಿಂದ ಯಾವುದೇ ಮಾಹಿತಿ ಹೊರಬಿದ್ದಿರಲಿಲ್ಲ.

ಜೇಟ್ಲಿ ಬಹಳ ವರ್ಷಗಳಿಂದ ಮಧುಮೇಹ ಪೀಡಿತರಾಗಿದ್ದು, ಅವರಿಗೆ ಕಿಡ್ನಿ ಕಸಿಯನ್ನು ಸಹ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವರಿಗೆ ಸಾಫ್ಟ್ ಟಿಸ್ಯೂ ಕ್ಯಾನ್ಸರ್ ಇದೆ ಎಂಬುದು ಪತ್ತೆಯಾಗಿತ್ತು. ಸ್ಥೂಲಕಾಯದಿಂದ ಮುಕ್ತಿ ಪಡೆಯಲು ಅವರು ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೂ ಸಹ ಒಳಗಾಗಿದ್ದರು.

66 ವರ್ಷದ ಹಿರಿಯ ನಾಯಕ ಮೋದಿ ಸರಕಾರದ ಮೊದಲ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆಯನ್ನೆದುರಿಸಿರಲಿಲ್ಲ. ಬಿಜೆಪಿ ಭಾರಿ ಬಹುಮತದಿಂದ ಗೆದ್ದ ಬಳಿಕ ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಬೇಡಿ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ವಿನಂತಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ