ಆ್ಯಪ್ನಗರ

ಸೆ.1ರಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿ ಸೇರ್ಪಡೆ

ಮಾಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರು ಬಿಜೆಪಿ ಸೇರ್ಪಡೆ ಆಗುವುದನ್ನು ಖಚಿತ ಪಡಿಸಿದ್ದಾರೆ.

Navbharat Times 30 Aug 2019, 1:13 pm
ಮುಂಬಯಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಆಗಿದ್ದ ನಾರಾಯಣ್ ರಾಣೆ ಅವರು ಸೆಪ್ಟೆಂಬರ್ 1ರಂದು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.
Vijaya Karnataka Web narayan rane


ಕಾಂಗ್ರೆಸ್ ತೊರೆದ ಬಳಿಕ ಮಹಾರಾಷ್ಟ್ರ ಸ್ವಾಭಿಮಾನ್ ಪಕ್ಷ ಸ್ಥಾಪಿಸುವ ಮೂಲಕ ಎನ್‌ಡಿಎ ಭಾಗವಾಗಿದ್ದ ರಾಣೆ, ಬಿಜೆಪಿ ಬೆಂಬಲದೊಂದಿದೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಈ ಕುರಿತು ಪತ್ರಕರ್ತರ ಜತೆ ಮಾತನಾಡಿರುವ ನಾರಾಯಣ ರಾಣೆ, 'ನಾನು ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಸೋಲ್ಹಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಕದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದೇನೆ' ಎಂದು ಸ್ಪಷ್ಟಪಡಿಸಿದ್ದಾರೆ.

ಅಷ್ಟೆ ಅಲ್ಲದೆ, ಎನ್‌ಸಿಪಿ ಶಾಸಕ ರಾಣಾ ಜಗಜೀತಸಿಂಹ ಪಾಟೀಲ್ ಮತ್ತು ಸತಾರಾ ಸಂಸದ ಉದಯನರಾಜೆ ಭೋಸಲೆ ಅವರು ಕೂಡ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ