ಆ್ಯಪ್ನಗರ

Chidambaram: ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣ: ಚಿದಂಬರಂಗೆ ಜೂ.5ರ ವರೆಗೆ ನಿರೀಕ್ಷಣಾ ಜಾಮೀನು

ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂಗೆ ದಿಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ.

TIMESOFINDIA.COM 30 May 2018, 5:42 pm
Vijaya Karnataka Web chidu
ಹೊಸದಿಲ್ಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಅಕ್ರಮ ಲೇವಾದೇವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿರುವ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂಗೆ ದಿಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ.

ಈ ಸಂಬಂಧ ಜಾರಿ ನಿರ್ದೇಶನಾಲಯ ಈಗಾಗಲೇ ಸಮನ್ಸ್‌ ನೀಡಿರುವ ಹಿನ್ನೆಲೆಯಲ್ಲಿ ಜೂ.5ರಂದು ನಿರ್ದೇಶನಾಲಯಕ್ಕೆ ಹಾಜರಾಗುವಂತೆ ಸೂಚಿಸುವುದರ ಜತೆಗೆ, ಅಲ್ಲಿಯ ವರೆಗೆ ಜಾರಿ ನಿರ್ದೇಶನಾಲಯ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದೊಂದಿಗೆ ಎಲ್ಲ ಮಾಹಿತಿಗಳನ್ನು ದಾಖಲೆಗಳ ಮೂಲಕ ಸಲ್ಲಿಸಿದ್ದು ವಿಚಾರಣೆಗೆ ಎಲ್ಲ ರೀತಿಯಲ್ಲಿ ಸಹಕರಿಸುತ್ತಿರುವುದಾಗಿ ಅರ್ಜಿಯಲ್ಲಿ ತಿಳಿಸಲಾಗಿದೆ. ಚಿದಂಬರಂ ಪರ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಹಾಗೂ ಅಭಿಷೇಕ್‌ ಮನು ಸಿಂಗ್ವಿ ವಾದ ಮಂಡಿಸಿದರು.

ವಿಶೇಷ ಪಬ್ಲಿಕ್‌ ಪ್ರಾಸಿಕ್ಯುಟರ್‌ ನಿತೇಶ್‌ ರಾಣ, ಜಾರಿ ನಿರ್ದೇಶನಾಲಯ, ಇಂದು ವಿಚಾರಣೆಗಾಗಿ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ವಾದಿಸಿದರು.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ಒ.ಪಿ.ಸೈನಿ, ಜೂ.5ರಂದು ಚಿದಂಬರಂಗೆ ಹಾಜರಾಗುವಂತೆ ಸೂಚಿಸಿದ, ಕೋರ್ಟ್‌, ಅಲ್ಲಿವರೆಗೆ ಜಾರಿ ನಿರ್ದೇಶನಾಲಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದರು.

ವೀಡಿಯೋ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ