ಆ್ಯಪ್ನಗರ

ಪ್ರಣಬ್‌ಗೆ ಮೋದಿ ಅಭಿನಂದನೆ, ಪ್ರತಿಕ್ರಿಯಿಸದ ರಾಹುಲ್‌, ಸೋನಿಯಾ

ಕಾಂಗ್ರೆಸ್‌ನ ಅಗ್ರ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸಮಾರಂಭಕ್ಕೆ ಗೈರು ಹಾಜರಾಗಿದ್ದು ಗಮನಾರ್ಹ.

PTI 10 Aug 2019, 5:00 am
ಹೊಸದಿಲ್ಲಿ: ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಕ್ಕೆ ಭಾಜನರಾದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿ ಗುರುವಾರ 'ಭಾರತ ರತ್ನ ' ಸ್ವೀಕರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭಾಶಯ ಕೋರಿದರು.
Vijaya Karnataka Web bharat pranab

ನೀವು ಪುರಸ್ಕಾರ ಸ್ವೀಕರಿಸುವುದನ್ನು ಕಂಡು ನನಗೆ ಹೆಮ್ಮೆ ಎನಿಸಿತು ಪ್ರಣಬ್‌ ಮುಖರ್ಜಿ. ದೇಶಕ್ಕಾಗಿ ನಿಮ್ಮ ಅವಿರತ ಸೇವೆಗೆ ಸಿಕ್ಕ ಪುರಸ್ಕಾರವಿದು. ಅಭಿವೃದ್ಧಿ ಪಥದತ್ತ ದೇಶ ಕೊಂಡೊಯ್ದಿದಕ್ಕಾಗಿ ನಿಮಗೆ ಧನ್ಯವಾದ ಎಂದು ಪ್ರಧಾನಿ ಟ್ವೀಟ್‌ ಮಾಡಿದರು.

ಪ್ರಣಬ್‌ ಅವರು ಪುರಸ್ಕಾರ ಸ್ವೀಕಾರ ವೇಳೆ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ, ಗೃಹ ಸಚಿವ ಅಮಿತ್‌ ಶಾ ಉಪಸ್ಥಿತರಿದ್ದರು.
...............
ಕಾಂಗ್ರೆಸ್‌ನ ಅಗ್ರ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸಮಾರಂಭಕ್ಕೆ ಗೈರು ಹಾಜರಾಗಿದ್ದು ಗಮನಾರ್ಹ.
ರಾಹುಲ್‌ ಗಾಂಧಿ ಅವರಿಗೆ ರಾಷ್ಟ್ರಪತಿ ಭವನದಲ್ಲಿನ ಸಮಾರಂಭಕ್ಕೆ ಆಹ್ವಾನ ಕೂಡ ನೀಡಲಾಗಿತ್ತು. ಆದರೆ ಅವರು ಬಂದಿರಲಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ