ಆ್ಯಪ್ನಗರ

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಕ್ಕೆ ನಾಲ್ವರು ಬಲಿ

ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಯಾದ 24 ಗಂಟೆಗಳ ಅವಧಿಯಲ್ಲಿ ಮುಂಬಯಿಯ ಸಾಂತಾಕ್ರೂಜ್‌ನಲ್ಲಿ 242 ಮಿ.ಮೀ ಮಳೆ ಬಿದ್ದಿದೆ.

PTI 6 Sep 2019, 5:00 am
ಮುಂಬಯಿ: ಮಹಾರಾಷ್ಟ್ರದಲ್ಲಿ ಬುಧವಾರದ ಮಳೆ ಅಬ್ಬರಕ್ಕೆ ನಾಲ್ಕು ಜೀವಗಳು ಬಲಿಯಾಗಿವೆ. ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ನಲುಗಿದ್ದ ರಾಜ್ಯದಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ. ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ ಸಿದ್ದಾರ್ಥನಗರದಲ್ಲಿ ಮಳೆ ನೀರಿಗೆ ಸಿಲುಕಿ ಮೃತಪಟ್ಟಿದ್ದರೆ, ಠಾಣೆ ಹಾಗೂ ಪಾಲ್ಘರ್‌ ಜಿಲ್ಲೆಯಲ್ಲಿ ಇಬ್ಬರು ನಾಲೆಗೆ ಬಿದ್ದು ಅಸುನೀಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಯಾದ 24 ಗಂಟೆಗಳ ಅವಧಿಯಲ್ಲಿ ಮುಂಬಯಿಯ ಸಾಂತಾಕ್ರೂಜ್‌ನಲ್ಲಿ 242 ಮಿ.ಮೀ ಮಳೆ ಬಿದ್ದಿದೆ.
Vijaya Karnataka Web rain

30 ವಿಮಾನ ರದ್ದು: ರೈಲು, ಬಸ್‌ ಹಾಗೂ ವಿಮಾನ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿದ್ದರಿಂದ ಪ್ರಯಾಣಿಕರು ಪರದಾಡಿದರು. ಗುರುವಾರ 30 ವಿಮಾನಗಳನ್ನು ರದ್ದುಪಡಿಸಲಾಗಿದ್ದು, 118 ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮೂರು ರೈಲುಗಳನ್ನು ರದ್ದುಪಡಿಸಲಾಗಿದ್ದು, ಹಲವು ರೈಲುಗಳ ಮಾರ್ಗ ಬದಲಿಸಲಾಗಿದೆ.
ಹಿಮಾಚಲಕ್ಕೆ ಕೇಂದ್ರ ತಂಡ: ಎರಡು ವಾರಗಳ ಹಿಂದೆ ಭಾರಿ ಮಳೆಗೆ ನಲುಗಿದ್ದ ಹಿಮಾಚಲ ಪ್ರದೇಶದಲ್ಲಿ ಪ್ರವಾಹ ನಷ್ಟ ಅಂದಾಜಿಸಲು ಕೇಂದ್ರೀಯ ಅಂತರ್‌ ಸಚಿವಾಲಯ ತಂಡ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಒಡಿಶಾ ಹಾಗೂ ಗುಜರಾತ್‌ನಲ್ಲೂ ಮಳೆ ಅಬ್ಬರ ಮುಂದುವರಿದಿದೆ. ತಮಿಳುನಾಡುನಲ್ಲಿಯೂ ಉತ್ತಮ ಮಳೆಯಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ