ಆ್ಯಪ್ನಗರ

CBSE Topper: ರಾಷ್ಟ್ರಪತಿಯವರಿಂದ ಬೆನ್ನು ತಟ್ಟಿಸಿಕೊಂಡಿದ್ದ ಸಿಬಿಎಸ್‌ಇ ಟಾಪರ್‌ ಮೇಲೆ ಗ್ಯಾಂಗ್‌ ರೇಪ್‌

ಹರಿಯಾಣ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರಶ್ನೆ ಉದ್ಭವವಾಗಿದೆ.

PTI 14 Sep 2018, 11:16 am
ಗುರುಗ್ರಾಮ: ರಾಷ್ಟ್ರಪತಿ ಅವರಿಂದ ಗೌರವ ಪಡೆದಿದ್ದ ಸಿಬಿಎಸ್‌ಇ ಟಾಪರ್‌ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೀನಾಯ ಕೃತ್ಯ ಹರಿಯಾಣದಲ್ಲಿ ಬುಧವಾರ ನಡೆದಿದೆ. ಇದರಿಂದ ಹರಿಯಾಣ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.
Vijaya Karnataka Web Haryana Gang rape


ಬರ್ಬರ ಅತ್ಯಾಚಾರದಿಂದ ಪ್ರಜ್ಞೆ ಕಳೆದುಕೊಂಡ 19 ವರ್ಷದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಬಸ್‌ ನಿಲ್ದಾಣದಲ್ಲಿ ಎಸೆದು ಹೋಗಿದ್ದಾರೆ.

ಗುರುಗ್ರಾಮದ ರೆವರಿಯಲ್ಲಿ ಕೋಚಿಂಗ್‌ ಕ್ಲಾಸ್‌ಗೆ ತೆರಳುತ್ತಿದ್ದಾಗ ಕಾರಿನಲ್ಲಿ ಆಗಮಿಸಿದ ಮೂವರು ಯುವಕರು ವಿದ್ಯಾರ್ಥಿನಿಯನ್ನು ಎಳೆದೊಯ್ದು, ಅಜ್ಞಾತ ಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಒಂದಷ್ಟು ಮಂದಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ದೂರು ನೀಡಲು ಒಂದು ಪೊಲೀಸ್‌ ಠಾಣೆಯಿಂದ ಮತ್ತೊಂದು ಪೊಲೀಸ್‌ ಠಾಣೆಗೆ ಅಲೆದರೂ ಯಾವ ಪೊಲೀಸ್‌ ಠಾಣೆಯಲ್ಲೂ ಪ್ರಕರಣ ದಾಖಲಿಸಲು ಮುಂದಾಗಲಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ದುಷ್ಕರ್ಮಿಗಳು ಬೆದರಿಕೆ ಒಡ್ಡುತ್ತಿರುವುದಾಗಿಯೂ ದೂರಿದ್ದಾರೆ.

ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ರಿವಾರಿಯ ಪೊಲೀಸ್‌ ಅಧಿಕಾರಿ, ಜೀರೋ ಎಫ್‌ಐಆರ್‌ ದಾಖಲಿಸಲಾಗಿದ್ದು, ಅತ್ಯಾಚಾರ ಘಟನೆ ನಡೆದ ಪ್ರದೇಶದ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ