ಆ್ಯಪ್ನಗರ

ಛೋಟಾ ರಾಜನ್‌ಗೆ 8 ವರ್ಷ ಜೈಲು ಶಿಕ್ಷೆ

2012ರ ಅಕ್ಟೋಬರ್‌ನಲ್ಲಿ ಸ್ನೇಹಿತನನ್ನು ಭೇಟಿಯಾಗಲು ತೆರಳುತ್ತಿದ್ದ ಹೋಟೆಲ್‌ ಉದ್ಯಮಿ ಬಿ.ಆರ್‌. ಶೆಟ್ಟಿ ಅವರ ಮೇಲೆ ಅಂಧೇರಿಯಲ್ಲಿ ಗುಂಡು ಹಾರಿಸಲಾಗಿತ್ತು.

PTI 21 Aug 2019, 5:00 am
ಮುಂಬಯಿ: 2012ರಲ್ಲಿ ಹೋಟೆಲ್‌ ಉದ್ಯಮಿಯೊಬ್ಬರ ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಪಾತಕಿ ಛೋಟಾ ರಾಜನ್‌ಗೆ ಮುಂಬಯಿ ಕೋರ್ಟ್‌ ಮಂಗಳವಾರ 8 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ(ಎಮ್‌ಸಿಒಸಿಎ) ಹಾಗೂ ಭಾರತೀಯ ದಂಡ ಸಂಹಿತೆ (ಐಪಿಸಿ) ಅನ್ವಯ ರಾಜನ್‌ ಸೇರಿದಂತೆ ಆರು ಮಂದಿ ಅಪರಾಧಿಗಳಿಗೆ ವಿಶೇಷ ನ್ಯಾಯಾಧೀಶ ಎ.ಟಿ. ವಾಂಖಡೆ ಶಿಕ್ಷೆ ವಿಧಿಸಿದ್ದಾರೆ. ಜತೆಗೆ ತಲಾ 5 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ.
Vijaya Karnataka Web chotarajan


2012ರ ಅಕ್ಟೋಬರ್‌ನಲ್ಲಿ ಸ್ನೇಹಿತನನ್ನು ಭೇಟಿಯಾಗಲು ತೆರಳುತ್ತಿದ್ದ ಹೋಟೆಲ್‌ ಉದ್ಯಮಿ ಬಿ.ಆರ್‌. ಶೆಟ್ಟಿ ಅವರ ಮೇಲೆ ಅಂಧೇರಿಯಲ್ಲಿ ಗುಂಡು ಹಾರಿಸಲಾಗಿತ್ತು.
ಪತ್ರಕರ್ತ ಜೆ.ಡೇ ಹತ್ಯೆ ಸೇರಿದಂತೆ ಸುಮಾರು 40 ಪ್ರಕರಣಗಳಲ್ಲಿ ಆರೋಪಿಯಾಗಿರುವ ಪಾತಕಿ ರಾಜನ್‌ ಸದ್ಯ ತಿಹಾರ್‌ ಜೈಲಿನಲ್ಲಿದ್ದಾನೆ. ಆತನಿಗೆ ಪ್ರತಿನಿತ್ಯ ನೀಡಲಾಗುತ್ತಿರುವ ಆಹಾರವನ್ನು ಜೈಲಿನ ವರಿಷ್ಠಾಧಿಕಾರಿ, ವೈದ್ಯರು ಕೂಲಂಕಷ ತಪಾಸಣೆ ನಡೆಸುತ್ತಿದ್ದಾರೆ. ಅಡುಗೆ ತಯಾರಿಸಿದ ಬಾಣಸಿಗ ಮೊದಲು ಆಹಾರ ಸೇವಿಸಬೇಕು. ಅದಾಗಿ 10 ನಿಮಿಷದ ನಂತರವೇ ರಾಜನ್‌ಗೆ ಅದನ್ನು ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಬದ್ಧ ವೈರಿಯಾಗಿರುವ ರಾಜನ್‌ಅನ್ನು ಜೈಲಿನಲ್ಲಿಯೇ ಹತ್ಯೆಗೈಯಲು ಡಿ-ಕಂಪನಿ ಸಂಚು ರೂಪಿಸಿದೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜೈಲಿನಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ