ಆ್ಯಪ್ನಗರ

ಕಣಿವೆಯ ಲೆ.ಗವರ್ನರ್ ಹುದ್ದೆ ತ್ಯಜಿಸಿದ ಜಿಸಿ ಮುರ್ಮು ಇದೀಗ ಭಾರತದ ನೂತನ ಸಿಎಜಿ!

ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದ ಜಿಸಿ ಮುರ್ಮು ಅವರನ್ನು, ಭಾರತದ ನೂತನ ಮಹಾಲೆಕ್ಕ ಪರಿಶೋಧಕ ಮತ್ತು ಮಹಾಲೇಖಪಾಲ(ಸಿಎಜಿ)ರನ್ನಾಗಿ ನೇಮಕ ಮಾಡಲಾಗಿದೆ.

Vijaya Karnataka Web 6 Aug 2020, 11:12 pm
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದ ಜಿಸಿ ಮುರ್ಮು ಅವರನ್ನು, ಭಾರತದ ನೂತನ ಮಹಾಲೆಕ್ಕ ಪರಿಶೋಧಕ ಮತ್ತು ಮಹಾಲೇಖಪಾಲ(ಸಿಎಜಿ)ರನ್ನಾಗಿ ನೇಮಕ ಮಾಡಲಾಗಿದೆ.
Vijaya Karnataka Web Murmu
ಸಂಗ್ರಹ ಚಿತ್ರ


ಕೇವಲ ಎರಡು ದಿನಗಳ ಹಿಂದಷ್ಟೇ ಕಣಿವೆಯ ಲೆ. ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದ ಜಿಸಿ ಮುರ್ಮು ಅವರನ್ನು, ನೂತನ ಸಿಎಜಿಯನ್ನಾಗಿ ನೇಮಕ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಜಿಸಿ ಮುರ್ಮು ರಾಜೀನಾಮೆ!

ಪ್ರಸ್ತುತ ಸಿಎಜಿ ರಾಜೀವ್ ಮೆಹರಿಷಿ ಈ ವಾರದಲ್ಲಿ ನಿವೃತ್ತರಾಗಲಿದ್ದು, ಇವರ ಸ್ಥಾನಕ್ಕೆ ಜಿಸಿ ಮುರ್ಮು ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಸಿಎಜಿಯಾಗಿ ಅಧಿಕಾರ ಸ್ವೀಕರಿಸಲೆಂದೇ ಜಿಸಿ ಮುರ್ಮು ಜಮ್ಮು ಮತ್ತು ಕಾಶ್ಮೀರದ ಲೆ.ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಚುನಾವಣೆಗೆ ಸಂಬಂಧಿಸಿದಂತೆ ಜಿಸಿ ಮುರ್ಮು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು. ಖುದ್ದು ಕೇಂದ್ರ ಚುನಾವಣಾ ಆಯೋಗ ಲೆ. ಗವರ್ನರ್ ತಮ್ಮ ಕಾರ್ಯವ್ಯಾಪ್ತಿ ಮೀರಿ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

1985ನೇ ಬ್ಯಾಚ್‌ನ ಗುಜರಾತ್‌ ಕೇಡರ್‌ ಐಎಎಸ್‌ ಅಧಿಕಾರಿಯಾಗಿರುವ ಜಿಸಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ಕಾಲದಿಂದಲೂ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ

ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ಜಿಸಿ ಮುರ್ಮು, ಇದೀಗ ಭಾರತದ ನೂತನ ಮಹಾಲೆಕ್ಕ ಪರಿಶೋಧಕ ಮತ್ತು ಮಹಾಲೇಖಪಾಲ(ಸಿಎಜಿ)ಯಾಗಿ ನೇಮಕಗೊಂಡಿದ್ದಾರೆ. ಇನ್ನು ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ