ಆ್ಯಪ್ನಗರ

ಪುತ್ರಿಯ ಪ್ರಿಯಕರನ ಜನನಾಂಗ ಕತ್ತರಿಸಿದ ತಂದೆ

ತನ್ನ ಮಗಳ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ನೋಡಿದ ವ್ಯಕ್ತಿಯು ಆತನನ್ನು ಥಳಿಸಿ ಜನನಾಂಗಗಳನ್ನು ಕತ್ತರಿಸಿ ಹಾಕಿರುವ ಘಟನೆ ಗೋರಖ್‌ಪುರದಲ್ಲಿ ನಡೆದಿದೆ.

TIMESOFINDIA.COM 20 Sep 2018, 2:40 pm
ಗೋರಖ್‌ಪುರ: ತನ್ನ ಮಗಳ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ನೋಡಿದ ವ್ಯಕ್ತಿಯು ಆತನನ್ನು ಥಳಿಸಿ ಜನನಾಂಗಗಳನ್ನು ಕತ್ತರಿಸಿ ಹಾಕಿರುವ ಘಟನೆ ಗೋರಖ್‌ಪುರದಲ್ಲಿ ನಡೆದಿದೆ.
Vijaya Karnataka Web arrest


ಗಂಭೀರ ಗಾಯಗೊಂಡಿರುವ ಯುಕನ ಸ್ಥಿತಿ ಚಿಂತಾಜನಕವಾಗಿದ್ದು, ಲಖನೌದ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಯುವತಿಯ ತಂದೆ ಗುಡ್ಡು ನಿಶಾದ್ ಮತ್ತು ಸೋದರರಾದ ಸಂದೀಪ್ ಪ್ರದೀಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದೀಪಚಂದ ಗುಪ್ತಾ ಹಲ್ಲೆಗೊಳಗಾದ ಯುವಕ. ಮನೆಯಲ್ಲಿ ತನ್ನ ಪುತ್ರಿ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ಕಂಡ ಆಕೆಯ ತಂದೆ ಹಾಗೂ ಇಬ್ಬರು ಪುತ್ರರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ಹಾನಿ ಉಂಟುಮಾಡುವುದು) ಹಾಗೂ 326 (ಮಾರಕಾಸ್ತ್ರಗಳಿಂದ ಹಲ್ಲೆ) ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.

ಘಟನೆ ಬಳಿಕ ಸಂತ್ರಸ್ತ ಯುವಕ ನೋವಿನಿಂದ ನರಳಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ರವಾನಿಸಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ ಎಂದು ಖಜ್ನಿ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ರೈ ತಿಳಿಸಿದ್ದಾರೆ.

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದು, ಸಾಕಷ್ಟು ಬಾರಿ ಎಚ್ಚರಿಕೆ ಸಹ ನೀಡಿದ್ದರು. ಪೋಷಕರ ಮಾತಿಗೆ ಕ್ಯಾರೆ ಎನ್ನದೆ ಇವರು ತಮ್ಮ ಹಳೇ ಚಾಳಿಯನ್ನೇ ಮುಂದುವರಿಸಿದ್ದರು' ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ