ಆ್ಯಪ್ನಗರ

ಎನ್‌ಆರ್‌ಸಿ ಬಗ್ಗೆ ವಿಶ್ವಸಂಸ್ಥೆ ನೇತೃತ್ವದಲ್ಲಿ ಜನಮತ ಗಣನೆಗೆ ಮಮತಾ ಬ್ಯಾನರ್ಜಿ ಸವಾಲು

ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತು ವಿಶ್ವಸಂಸ್ಥೆ ಉಸ್ತುವಾರಿಯಲ್ಲಿ ಜನಾಭಿಪ್ರಾಯ ಸಂಗ್ರಹಿಸಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರಕಾರಕ್ಕೆ ಸವಾಲು ಹಾಕಿದ್ದಾರೆ.

Vijaya Karnataka Web 20 Dec 2019, 6:52 am
ಕೋಲ್ಕೊತಾ: ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತು ವಿಶ್ವಸಂಸ್ಥೆ ಉಸ್ತುವಾರಿಯಲ್ಲಿ ಜನಾಭಿಪ್ರಾಯ ಸಂಗ್ರಹಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರಕಾರಕ್ಕೆ ಸವಾಲು ಹಾಕಿದ್ದಾರೆ.
Vijaya Karnataka Web Murshidabad


ಪ್ರತಿಭಟನಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಒಂದೊಮ್ಮೆ ಜನಾಭಿಪ್ರಾಯ ಮೋದಿ ಸರಕಾರದ ವಿರುದ್ಧ ಬಂದರೆ ಬಿಜೆಪಿಯು ಅಧಿಕಾರ ತೊರೆಯಬೇಕು ಎಂದು ಆಗ್ರಹಿಸಿದರು. ''ಬಿಜೆಪಿಗೆ ಬಹುಮತ ಇದೆ ಎಂದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದು ಮಾಡಬಹುದು ಎಂದಲ್ಲ. ಪೌರತ್ವ ತಿದ್ದುಪಡಿ ವಿಧೇಯಕದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಬಿಜೆಪಿಯು ದೇಶದಲ್ಲಿನ ಹಿಂದೂ ಮತ್ತು ಮುಸ್ಲಿಮರ ನಡುವಿನ ಹೋರಾಟ ಎಂಬಂತೆ ಬಿಂಬಿಸುತ್ತಿದೆ,'' ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳದಲ್ಲಿ ಎರಡೂ ಕಾಯಿದೆಗಳನ್ನು ಜಾರಿಗೊಳಿಸಲು ಬಿಡುವುದಿಲ್ಲಎಂದು ಪುನರುಚ್ಚರಿಸಿದ ಅವರು, ನಿಷೇಧಾಜ್ಞೆಗಳ ಮೂಲಕ ದೇಶಾದ್ಯಂತ ನಡೆಯುತ್ತಿರುವ ಹೋರಾಟ ಹತ್ತಿಕ್ಕುವ ಬಿಜೆಪಿ ಪ್ರಯತ್ನ ಫಲಿಸುವುದಿಲ್ಲ ಎಂದು ಹೇಳಿದರು.

ಜಾರಿ ಮಾಡಿಯೇ ಸಿದ್ಧ ಎಂದ ನಡ್ಡಾ
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಸ್ಪಷ್ಟಪಡಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಅಫಘಾನಿಸ್ತಾನದ ಸಿಖ್‌ ನಿರಾಶ್ರಿತರ ನಿಯೋಗಕ್ಕೆ ಅಭಯ ನೀಡಿದ ಅವರು, ಪ್ರತಿಪಕ್ಷಗಳು ತಮ್ಮ ಮತಬ್ಯಾಂಕ್‌ ಭದ್ರಗೊಳಿಸಿಕೊಳ್ಳುವ ಉದ್ದೇಶದಿಂದ ಈ ಎರಡೂ ಕಾಯಿದೆಗಳ ವಿಚಾರದಲ್ಲಿಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಆರೋಪಿಸಿದರು.

''ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನಗಳಿಂದ ಭಾರತಕ್ಕೆ ಬಂದಿರುವ ಧಾರ್ಮಿಕ ಅಲ್ಪಸಂಖ್ಯಾತರು 28-30 ವರ್ಷಗಳಿಂದ ದೇಶದ ಪೌರತ್ವ ಸಿಗದೇ, ತಮ್ಮ ಮಕ್ಕಳಿಗೆ ಇಲ್ಲಿನ ಶಾಲೆಗಳಲ್ಲಿ ಶಿಕ್ಷಣ ಕೊಡಿಸಲಾಗದೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿಪಕ್ಷಗಳು ತಮ್ಮ ಮತಬ್ಯಾಂಕ್‌ ಹೊರತಾಗಿ ಬೇರೆ ಏನನ್ನೂ ನೋಡುತ್ತಿಲ್ಲ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸುತ್ತಿರುವವರು ನನ್ನನ್ನು ಭೇಟಿ ಮಾಡಿದರೆ ಕಾಯಿದೆಯ ಅಗತ್ಯವನ್ನು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ,'' ಎಂದು ನಡ್ಡಾ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ