ಆ್ಯಪ್ನಗರ

ಮನೋಹರ್‌ ಪರಿಕ್ಕರ್‌ ಅಂತ್ಯಕ್ರಿಯೆ

ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಣಜಿಯ ಕಲಾ ಅಕಾಡೆಮಿಯಲ್ಲಿ ಇರಿಸಲಾಗಿತ್ತು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

Vijaya Karnataka Web 18 Mar 2019, 6:16 pm
ಪಣಜಿ: ಭಾನುವಾರ ನಿಧನರಾದ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಪಣಜಿಯಲ್ಲಿ ನೆರವೇರಿತು. ಸಕಲ ಸರಕಾರಿ ಹಾಗೂ ಮಿಲಿಟರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪಣಜಿಯ ಕಲಾ ಅಕಾಡೆಮಿಯಲ್ಲಿದ್ದ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ನಡೆಯುವ ಎಸ್‌ಎಜಿ ಮೈದಾನಕ್ಕೆ ಸೇನಾ ವಾಹನದ ಮೂಲಕ ಕೊಂಡೊಯ್ಯಲಾಯಿತು.

ಅಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಿತು. ಸಾವಿರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಸಚಿವ ಸಂಪುಟದ ಸಹೋದ್ಯೋಗಿಗಳು ಮನೋಹನರ್ ಪರಿಕ್ಕರ್‌ಗೆ ಪುಷ್ಪನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಣಜಿಯ ಕಲಾ ಅಕಾಡೆಮಿಯಲ್ಲಿ ಇರಿಸಲಾಗಿತ್ತು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ