ಆ್ಯಪ್ನಗರ

ಮಹದಾಯಿ ತೀರ್ಪಿನ ವಿರುದ್ಧ ಸುಪ್ರೀಂಗೆ ಗೋವಾ ಅರ್ಜಿ

ಗೋವಾ ಬಿಜೆಪಿ ಶಾಸಕರು ಮತ್ತು ಪ್ರತಿಪಕ್ಷ ಶಾಸಕರು ಎಸ್‌ಎಲ್‌ಪಿ ದಾಖಲಿಸಲು ಸರಕಾರದ ಮೇಲೆ ಒತ್ತಡ ಹೇರಿದ್ದರು. ಮಹದಾಯಿ ನದಿ ನೀರು ಹಂಚಿಕೆ ಕುರಿತು ಕಳೆದ ವರ್ಷ ಆಗಸ್ಟ್‌ನಲ್ಲಿ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಸರಕಾರಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧಿಕರಣ ಕರ್ನಾಟಕಕ್ಕೆ 13.42 ಟಿಎಂಸಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ನೀರು ಹಂಚಿಕೆ ಮಾಡಿ ತೀರ್ಪು ನೀಡಿತ್ತು.

PTI 18 Jul 2019, 5:00 am
ಪಣಜಿ: ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ಹರಿಸುವ ಕುರಿತು ನ್ಯಾಯಾಧಿಕರಣ(ಎಂಡಬ್ಲುಡಿಟಿ) ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ದಾವೆ ಹೂಡಲು ಗೋವಾ ಸರಕಾರ ನಿರ್ಧರಿಸಿದೆ.
Vijaya Karnataka Web pramod sawant

ಈ ಕುರಿತು ವಿಧಾನಸಭೆಗೆ ಬುಧವಾರ ಮಾಹಿತಿ ನೀಡಿದ ಗೋವಾ ಸಿಎಂ ಪ್ರಮೋದ್‌ ಸಾವಂತ್‌, 19ರಂದು ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಎಸ್‌ಎಲ್‌ಪಿ ದಾಖಲಿಸಲಾಗುವುದು ಎಂದಿದ್ದಾರೆ.

ಗೋವಾ ಬಿಜೆಪಿ ಶಾಸಕರು ಮತ್ತು ಪ್ರತಿಪಕ್ಷ ಶಾಸಕರು ಎಸ್‌ಎಲ್‌ಪಿ ದಾಖಲಿಸಲು ಸರಕಾರದ ಮೇಲೆ ಒತ್ತಡ ಹೇರಿದ್ದರು.
ಮಹದಾಯಿ ನದಿ ನೀರು ಹಂಚಿಕೆ ಕುರಿತು ಕಳೆದ ವರ್ಷ ಆಗಸ್ಟ್‌ನಲ್ಲಿ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಸರಕಾರಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧಿಕರಣ ಕರ್ನಾಟಕಕ್ಕೆ 13.42 ಟಿಎಂಸಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ನೀರು ಹಂಚಿಕೆ ಮಾಡಿ ತೀರ್ಪು ನೀಡಿತ್ತು.
ಈಗಾಗಲೇ ಮಹದಾಯಿಯಿಂದ ಮಲಪ್ರಭಾಗೆ ನದಿ ನೀರು ತಿರುಗಿಸಲಾಗಿದೆ ಎಂದು ಆರೋಪಿಸಿ ನ್ಯಾಯಾಧಿಕರಣಕ್ಕೆ ಗೋವಾ ಸರಕಾರ ದೂರು ಸಲ್ಲಿಸಿದೆ. ಅವಿಧೇಯತೆ ಅರ್ಜಿಯನ್ನು ಕರ್ನಾಟಕದ ವಿರುದ್ಧ ಹೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ