ಆ್ಯಪ್ನಗರ

ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ನಿರೀಕ್ಷೆ

ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆ ಬರುವ ಎಲ್ಲಾ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಜೆನ್ಸೀಸ್ 13 Apr 2016, 4:17 am
ಹೊಸದಿಲ್ಲಿ: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆ ಬರುವ ಎಲ್ಲಾ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವರ್ಷಗಳಿಂದ ಮಳೆ ಕೊರತೆ ಎದುರಾದ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಮತ್ತು ದೇಶದ ಅರ್ಥ ವ್ಯವಸ್ಥೆಯ ಪ್ರಗತಿಯ ಮೇಲೆ ವ್ಯತಿರಿಕ್ತ ಪರಿಣಾಮ ಸೃಷ್ಟಿಸಿತ್ತು.
Vijaya Karnataka Web good mansoon expected this year
ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ನಿರೀಕ್ಷೆ


ಈ ವರ್ಷದ ಮುಂಗಾರು ಮುನ್ಸೂಚನೆಯ ವಿವರ ನೀಡಿದ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಲಕ್ಷ್ಮಣ್‌ ಸಿಂಗ್‌ ರಾಥೋಡ್‌, ಈ ಬಾರಿ ಮುಂಗಾರು ದೀರ್ಘಾವಯ ಸರಾಸರಿಗಿಂತ ಶೇ 106ರಷ್ಟು (ಸಾಮಾನ್ಯಕ್ಕಿಂತ ಶೇ 6 ಹೆಚ್ಚಿಗೆ) ಇರಲಿದೆ. ಕಳೆದ ವರ್ಷ ಮುಂಗಾರು ಸಾಮಾನ್ಯಕ್ಕಿಂತ ಶೇ 14ರಷ್ಟು ಕಡಿಮೆ ಇತ್ತು ಎಂದು ತಿಳಿಸಿದರು.

ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆ ನಿರೀಕ್ಷಿಸಲಾಗುತ್ತಿದೆ. ಹೆಚ್ಚು ಕಡಿಮೆ ಈ ಬಾರಿ ಮುಂಗಾರು ಮಳೆ ದೇಶಾದ್ಯಂತ ಸಮಾನ ಪ್ರಮಾಣದಲ್ಲಿ ಸುರಿಯುವ ಸಾಧ್ಯತೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈಶಾನ್ಯ ಭಾರತ ಮತ್ತು ಆಗ್ನೇಯ ಭಾರತ ಅದರಲ್ಲೂ ವಿಶೇಷವಾಗಿ ತಮಿಳುನಾಡಿನಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಕೊಂಚ ಕಡಿಮೆ ಮಳೆ ಬೀಳುವ ಸಾಧ್ಯತೆ ಇದೆ. ಬರಪೀಡಿತ ಮರಾಠವಾಡದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ದೀರ್ಘಾವಯ ಸರಾಸರಿಯ ಶೇ 90ಕ್ಕಿಂತ ಕಡಿಮೆ ಮಳೆ ಆದರೆ ಅದನ್ನು ‘ಕೊರತೆಯ ಮುಂಗಾರು’, ಶೇ 90ರಿಂದ ಶೇ 96ರಷ್ಟಿದ್ದರೆ ಅದು ಸಾಮಾನ್ಯಕ್ಕಿಂತ ಕಡಿಮೆ, ಶೇ 96ರಿಂದ ಶೇ 104ರ ಪ್ರಮಾಣದಲ್ಲಿ ಮಳೆ ಸುರಿದರೆ ಅದು ಸಾಮಾನ್ಯ ಮುಂಗಾರು, ಶೇ 104ರಿಂದ ಶೇ 110ರ ವರೆಗೆ ಮಳೆ ಸುರಿದರೆ ಅದಕ್ಕೆ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಹಾಗೂ ಶೇ 110ರ ಪ್ರಮಾಣ ದಾಟಿದರೆ ಅದನ್ನು ಹೆಚ್ಚುವರಿ ಮುಂಗಾರು ಎಂದು ಪರಿಗಣಿಸಲಾಗುತ್ತದೆ.

ಕಳೆದ ವರ್ಷ ದುರ್ಬಲ ಮುಂಗಾರಿನ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳನ್ನು ಬರಪೀಡಿತ ಎಂದು ಘೋಷಿಸಿ, ಕೇಂದ್ರ ಸರಕಾರ 10,000 ಕೋಟಿ ರೂ. ಪರಿಹಾರ ಪ್ಯಾಕೇಜ್‌ ಪ್ರಕಟಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ