ಆ್ಯಪ್ನಗರ

ಸಿಇಎ ಅರವಿಂದ್ ಪರ ಜೇಟ್ಲಿ ಬ್ಯಾಟಿಂಗ್

ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅವರ ವಾಗ್ದಾಳಿಗೆ ಗುರಿಯಾಗಿರುವ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಅರವಿಂದ್ ಸುಬ್ರಹ್ಮಣ್ಯನ್ ಪರವಾಗಿ ಸಚಿವ ಅರುಣ್ ಜೇಟ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ಏಜೆನ್ಸೀಸ್ 22 Jun 2016, 5:15 pm
ಹೊಸದಿಲ್ಲಿ: ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅವರ ವಾಗ್ದಾಳಿಗೆ ಗುರಿಯಾಗಿರುವ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಅರವಿಂದ್ ಸುಬ್ರಹ್ಮಣ್ಯನ್ ಪರವಾಗಿ ಸಚಿವ ಅರುಣ್ ಜೇಟ್ಲಿ ಬ್ಯಾಟಿಂಗ್ ಮಾಡಿದ್ದಾರೆ.
Vijaya Karnataka Web government has full confidence in arvind subramanian says arun jaitley
ಸಿಇಎ ಅರವಿಂದ್ ಪರ ಜೇಟ್ಲಿ ಬ್ಯಾಟಿಂಗ್


ಬೌದ್ಧಿಕ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದಂತೆ ದೇಶದ ಉನ್ನತ ಆರ್ಥಿಕ ತಜ್ಞ ಅರವಿಂದ್‌ ಅವರ ನಿಲುಗಳನ್ನು ಗುರಿಯಾಗಿಸಿಕೊಂಡು ಸ್ವಾಮಿ ಬುಧವಾರ ಸರಣಿ ಟ್ವೀಟ್ ಮಾಡಿದ್ದು, ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಜೇಟ್ಲಿ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಅವರ ಬಗ್ಗೆ ಸರಕಾರಕ್ಕೆ ಸಂಪೂರ್ಣಭರವಸೆಯಿದೆ.ಕಾಲಕಾಲಕ್ಕೆ ಅವರು ಮಹತ್ವದ ಒಳನೋಟಗಳನ್ನು ನೀಡುತ್ತಿರುತ್ತಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸ್ವಾಮಿ ಅವರ ಹೇಳಿಕೆಯಿಂದ ಬಿಜೆಪಿ ಕೂಡ ಅಂತರ ಕಾಯ್ದುಕೊಂಡಿದ್ದು, ಪಕ್ಷವು ಈ ಹೇಳಿಕೆಯನ್ನು ಸಮ್ಮತಿಸದು. ಅದು ಸ್ವಾಮಿ ಅವರ ವೈಯಕ್ತಿಕ ಅಭಿಪ್ರಾಯ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಕಾಂತ್ ಶರ್ಮಾ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ