ಆ್ಯಪ್ನಗರ

ಅರುಣಾಚಲ ಪ್ರದೇಶ ಭೇಟಿಗೆ ವಿದೇಶಿ ಪ್ರವಾಸಿರಿಗೆ ಅನುಮತಿ: ಕೇಂದ್ರ ಚಿಂತನೆ

ನಿಯಮ ಬದಲಿಸಲು ಸಿದ್ಧವಾಗಿರುವ ಕೇಂದ್ರ ಸರಕಾರ

Vijaya Karnataka Web 26 Mar 2018, 5:24 pm
ಹೊಸದಿಲ್ಲಿ: ಅರುಣಾಚಲ ಪ್ರದೇಶದ ಅತ್ಯಂತ ದುರ್ಗಮ ಪ್ರದೇಶಗಳು, ನಿಷೇಧಿತ ಪ್ರದೇಶಗಳನ್ನು ವೀಕ್ಷಿಸಲು ವಿದೇಶಿ ಪ್ರವಾಸಿಗರಿಗೂ ಅನುಮತಿ ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ.
Vijaya Karnataka Web govt looks to open up arunachal to foreign tourists
ಅರುಣಾಚಲ ಪ್ರದೇಶ ಭೇಟಿಗೆ ವಿದೇಶಿ ಪ್ರವಾಸಿರಿಗೆ ಅನುಮತಿ: ಕೇಂದ್ರ ಚಿಂತನೆ


ನಿಷೇಧಿತ ಪ್ರದೇಶದ ಪರವಾನಗಿ ವಲಯಕ್ಕೆ ಸಂಬಂಧಿಸಿದಂತೆ ಕೆಲವು ನೀತಿ-ನಿಯಮಗಳನ್ನು ಬದಲಾವಣೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ.

ಎಲ್ಲವೂ ಅಂದುಕೊಂಡಂತೆ ಸಾಗಿದರೆ ಅರುಣಾಚಲ ಪ್ರದೇಶದ ಕೆಲವು ಪ್ರದೇಶಗಳ ಭೇಟಿಗೆ ವಿದೇಶಿ ಪ್ರವಾಸಿಗರಿಗೂ ಅನುಮತಿ ದೊರೆಯಲಿದೆ.

ಜಮ್ಮು ಕಾಶ್ಮೀರದ ಲಡಾಕ್‌ ಮತ್ತು ಸಿಕ್ಕಿಂ ನಲ್ಲೂ ಇದೇ ರೀತಿ ನೀತಿ ನಿಯಮಗಳನ್ನು ಕೇಂದ್ರ ಸರಕಾರ ಬದಲಾವಣೆಮಾಡಿದೆ.

ಅರುಣಾಚಲ ಪ್ರದೇಶದ ತವಾಂಗ್‌ ಕಣಿವೆ, ಜೈರೋ, ಬೊಮ್ಡಿಲಾ ಸೇರಿದಂತೆ ಹಲವಾರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದಲ್ಲದೇ ಚೀನಾದ ಗಡಿ ಭಾಗದ ಕೆಲವು ಭಾಗಗಳಿಗೂ ಭೇಟಿ ನೀಡಲು ಅನುಮತಿ ದೊರೆಯಲಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಕೆ.ಜೆ. ಆಲ್ಫೋನ್ಸ್‌, ಗೃಹ ಸಚಿವಾಲಯಕ್ಕೆ ಈಗಾಗಲೇ ಎರಡು ವರ್ಷಗಳ ಹಿಂದೆಯೇ ಪತ್ರ ಬರೆಯಲಾಗಿತ್ತು. ಈಗ ಅನುಮತಿ ದೊರೆತಿರುವುದು ಸ್ವಾಗತಾರ್ಹ ಎಂದರು.

ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್‌ ಆಫ್‌ ಇಂಡಿಯಾ ಜತೆ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ರಾಶಿ ವರ್ಮಾ, ನೀತಿ-ನಿಯಮ ಬದಲಾವಣೆಯಿಂದ ಅರುಣಾಚಲ ಪ್ರದೇಶಕ್ಕೆ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೌದ್ಧ ಧರ್ಮದ ಜತೆ ನಂಟು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ರಾಜ್ಯಕ್ಕೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.


ಅರುಣಾಚಲ ಪ್ರದೇಶದ ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಮುಖ್ಯಮಂತ್ರಿ ಪೆಮಾ ಖಂಡು ಟ್ವೀಟಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ