ಆ್ಯಪ್ನಗರ

ಸುಗಮ ಕಲಾಪಕ್ಕೆ ಸೋನಿಯಾ ಸಹಕಾರ ಕೋರಿದ ಸರಕಾರ

ಜೋಷಿ ಅವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್‌ ತೋಮರ್‌ ಹಾಗೂ ಅರ್ಜುನ್‌ ರಾಮ್‌ ಮೇಘಾವಾಲ್‌ ಜತೆ ಸೋನಿಯಾ ನಿವಾಸಕ್ಕೆ ತೆರಳಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ''ಭೇಟಿ ಸೌಹಾರ್ದಯುತವಾಗಿತ್ತು. ಸುಗಮ ಕಲಾಪಕ್ಕಾಗಿ ಪ್ರತಿಪಕ್ಷಗಳ ಸಹಕಾರ ಕೋರಿದೆವು. ಆಡಳಿತ ಪಕ್ಷ ಸಹ ಪ್ರತಿಪಕ್ಷಗಳಿಗೆ ಸಹಕಾರ ನೀಡಬೇಕು ಎಂದು ಸೋನಿಯಾ ಮನವಿ ಮಾಡಿದರು.

PTI 8 Jun 2019, 5:00 am
ಹೊಸದಿಲ್ಲಿ: ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಅವರು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಶುಕ್ರವಾರ ಭೇಟಿ ಮಾಡಿ ಸಂಸತ್ತಿನ ಸುಗಮ ಕಲಾಪಕ್ಕೆ ಸಹಕಾರ ಕೋರಿದರು.
Vijaya Karnataka Web govt reaches out to sonia gandhi ahead of parliament session
ಸುಗಮ ಕಲಾಪಕ್ಕೆ ಸೋನಿಯಾ ಸಹಕಾರ ಕೋರಿದ ಸರಕಾರ


ಜೋಷಿ ಅವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್‌ ತೋಮರ್‌ ಹಾಗೂ ಅರ್ಜುನ್‌ ರಾಮ್‌ ಮೇಘಾವಾಲ್‌ ಜತೆ ಸೋನಿಯಾ ನಿವಾಸಕ್ಕೆ ತೆರಳಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ''ಭೇಟಿ ಸೌಹಾರ್ದಯುತವಾಗಿತ್ತು. ಸುಗಮ ಕಲಾಪಕ್ಕಾಗಿ ಪ್ರತಿಪಕ್ಷಗಳ ಸಹಕಾರ ಕೋರಿದೆವು. ಆಡಳಿತ ಪಕ್ಷ ಸಹ ಪ್ರತಿಪಕ್ಷಗಳಿಗೆ ಸಹಕಾರ ನೀಡಬೇಕು ಎಂದು ಸೋನಿಯಾ ಮನವಿ ಮಾಡಿದರು. ಯಾವುದೇ ಸಹಕಾರ ನೀಡಲು ಆಡಳಿತ ಪಕ್ಷ ಸದಾ ಸಿದ್ಧವಿರುವುದಾಗಿ ಭರವಸೆ ನೀಡಿದ್ದೇವೆ,'' ಎಂದು ತಿಳಿಸಿದರು.

ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಗುಲಾಮ್‌ ನಬಿ ಆಜಾದ್‌ ಮತ್ತು ಲೋಕಸಭೆಯಲ್ಲಿ ಡಿಎಂಕೆ ನಾಯಕ ಟಿ.ಆರ್‌.ಬಾಲು ಅವರನ್ನೂ ಜೋಷಿ ನೇತೃತ್ವದ ನಿಯೋಗ ಭೇಟಿ ಮಾಡಿತು. ಜೂನ್‌ 17ರಿಂದ ಜುಲೈ 26ರವರೆಗೆ 17ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯಲಿದೆ. ಜುಲೈ 5ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡಿಸಲಿದ್ದಾರೆ. ತ್ರಿವಳಿ ತಲಾಕ್‌ ಸೇರಿದಂತೆ ಹತ್ತಕ್ಕೂ ಹೆಚ್ಚು ಸುಗ್ರೀವಾಜ್ಞೆಗಳಿಗೆ ಅಂಗೀಕಾರ ಪಡೆಯಬೇಕಿದೆ. ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸರಕಾರ ಮುಂದಾಗಿದೆ.

ಸಮಿತಿ ಸಭೆ: ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಮಿತಿಯು ಶುಕ್ರವಾರ ಸಂಜೆ ಸಿಂಗ್‌ ನಿವಾಸದಲ್ಲಿ ಸಭೆ ನಡೆಸಿತು. ಗೃಹ ಸಚಿವ ಅಮಿತ್‌ ಶಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಸೇರಿದಂತೆ ಸಮಿತಿ ಸದಸ್ಯರು ಭಾಗವಹಿಸಿದ್ದರು. ಮುಂಬರುವ ಅಧಿವೇಶನದ ಕುರಿತು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ