ಆ್ಯಪ್ನಗರ

ವಿದೇಶಕ್ಕೆ ಪರಾರಿಯಾಗಿರುವ ನಿತ್ಯಾನಂದನ ಪತ್ತೆಗೆ ಗುಜರಾತ್‌ ಪೊಲೀಸರ ಪ್ರಯತ್ನ

ಬಿಡದಿಯ ಧ್ಯಾನ ಪೀಠದ ನಿತ್ಯಾನಂದ ಸ್ವಾಮಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದ್ದು ಆತನ ಸುಳಿವು ಪತ್ತೆ ಮಾಡಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಇತರ ತನಿಖಾ ಸಂಸ್ಥೆ ಮುಂದಾಗಿದೆ.

Vijaya Karnataka Web 22 Nov 2019, 8:58 pm
ಅಹಮದಾಬಾದ್‌: ವಿದೇಶಕ್ಕೆ ಪರಾರಿಯಾಗಿದ್ದಾನೆಂದು ಹೇಳಲಾಗಿರುವ ಬಿಡದಿಯ ಧ್ಯಾನ ಪೀಠದ ನಿತ್ಯಾನಂದ ಸ್ವಾಮಿಯ ಸುಳಿವು ಪತ್ತೆ ಮಾಡಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಇತರ ತನಿಖಾ ಸಂಸ್ಥೆಗಳ ಜತೆ ನಿರಂತರ ಸಂಪರ್ಕದಲ್ಲಿರುವುದಾಗಿ ಗುಜರಾತ್‌ ಪೊಲೀಸ್‌ ಇಲಾಖೆ ಹೇಳಿದೆ.
Vijaya Karnataka Web ನಿತ್ಯಾನಂದ ಸ್ವಾಮಿ
ನಿತ್ಯಾನಂದ ಸ್ವಾಮಿ


ನಿತ್ಯಾನಂದನಿಗೆ ಸೇರಿದ್ದೆಂದು ಹೇಳಲಾಗುತ್ತಿರುವ ಅಹಮದಾಬಾದ್‌ನ ಯೋಗಿನಿ ಸರ್ವಜ್ಞ ಪೀಠಂ ಆಶ್ರಮದ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹಿಸಲು ನಾಲ್ವರು ವಿದ್ಯಾರ್ಥಿನಿಯರನ್ನು ಅಪಹರಿಸಿದ ಆರೋಪ ಸಂಬಂಧ ಆತನ ವಿರುದ್ಧ ಗುಜರಾತಿನಲ್ಲಿಕೇಸು ದಾಖಲಾಗಿದೆ.

ನಾಲ್ವರು ವಿದ್ಯಾರ್ಥಿನಿಯರನ್ನು ಅಪಹರಿಸಿ ಅವರನ್ನು ಅಹಮದಾಬಾದ್‌ನ ಫ್ಲ್ಯಾಟ್‌ವೊಂದರಲ್ಲಿಕೂಡಿಟ್ಟು ದೇಣಿಗೆ ಸಂಗ್ರಹಿಸಲು ಬಾಲ ಕಾರ್ಮಿಕರಂತೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಆರೋಪ ಸಂಬಂಧ ಗುಜರಾತ್‌ ಪೊಲೀಸರು ಆಶ್ರಮ ನಡೆಸುತ್ತಿದ್ದ ಸಾಧ್ವಿ ಪ್ರಾಣ ಪ್ರಿಯಾನಂದ ಮತ್ತು ಪ್ರಿಯತತ್ವ ರಿದ್ಧಿ ಕಿರಣ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

''ಫ್ಲ್ಯಾಟ್‌ನಿಂದ ರಕ್ಷಿಸಲಾದ ವಿದ್ಯಾರ್ಥಿನಿಯರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ನಿತ್ಯಾನಂದ ಸುಳಿವು ಪತ್ತೆಗೆ ತನಿಖೆ ತೀವ್ರಗೊಳಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಇತರ ತನಿಖಾ ಸಂಸ್ಥೆಗಳ ಜತೆ ಸಂಪರ್ಕದಲ್ಲಿದ್ದು ಮಾಹಿತಿ ಕಲೆಹಾಕಲಾಗುತ್ತಿದೆ,'' ಎಂದು ಅಹಮದಾಬಾದ್‌ ಗ್ರಾಮೀಣ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ವಿ.ಅಸಾರಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ