ಆ್ಯಪ್ನಗರ

ಹರ್ಯಾಣ: ಪ್ರಿನ್ಸಿಪಾಲರ ಗುಂಡಿಟ್ಟು ಕೊಂದ ವಿದ್ಯಾರ್ಥಿ

ಹನ್ನೆರಡನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಪ್ರಿನ್ಸಿಪಾಲರನ್ನು ಗುಂಡಿಟ್ಟು ಕೊಲೆ ಮಾಡಿದ್ದಾನೆ. ಪ್ರಿನ್ಸಿಪಾಲ್‌ ರಿತು ಛಾಬ್ರಾ ಅವರು ತಮ್ಮ ಕೊಠಡಿಯಲ್ಲಿದ್ದಾಗ ಆರೋಪಿ .32 ಬೋರ್‌ ಗನ್‌ನಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Vijaya Karnataka Web 20 Jan 2018, 5:59 pm
ಯಮುನಾನಗರ್: ಹನ್ನೆರಡನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಪ್ರಿನ್ಸಿಪಾಲರನ್ನು ಗುಂಡಿಟ್ಟು ಕೊಲೆ ಮಾಡಿದ್ದಾನೆ. ಪ್ರಿನ್ಸಿಪಾಲ್‌ ರಿತು ಛಾಬ್ರಾ ಅವರು ತಮ್ಮ ಕೊಠಡಿಯಲ್ಲಿದ್ದಾಗ ಆರೋಪಿ .32 ಬೋರ್‌ ಗನ್‌ನಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Vijaya Karnataka Web haryana class 12 student shoots dead school principal in yamunanagar
ಹರ್ಯಾಣ: ಪ್ರಿನ್ಸಿಪಾಲರ ಗುಂಡಿಟ್ಟು ಕೊಂದ ವಿದ್ಯಾರ್ಥಿ


ಗಂಭೀರ ಗಾಯಗೊಂಡ ಛಾಬ್ರಾ ಅವರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸ್‌ ಉಪ ಅಧೀಕ್ಷಕ (ಡಿಎಸ್ಪಿ) ದೇಶ್‌ ರಾಜ್‌ ತಿಳಿಸಿದರು.

ಆರೋಪಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದೂ ಅವರು ಮಾಹಿತಿ ನೀಡಿದರು.

ಶನಿವಾರ ಬೆಳಗ್ಗೆ 11:30ರಿಂದ ಮಧ್ಯಾಹ್ನ 12 ಗಂಟೆ ಮಧ್ಯೆ ಈ ಘಟನೆ ನಡೆದಿದೆ. ಹತ್ಯೆಯ ಹಿಂದಿನ ಉದ್ದೇಶವೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ