ಆ್ಯಪ್ನಗರ

ಹತ್ರಾಸ್ ಪ್ರಕರಣ: ಪಂಜಾಬ್‌, ರಾಜಸ್ಥಾನದಲ್ಲಿ ಹೀಗಾಗಿದ್ದರೆ ಹೋಗಿ ಹೋರಾಡುತ್ತಿದ್ದೆ- ರಾಹುಲ್‌ ಗಾಂಧಿ

ಪಂಜಾಬ್‌ ಮತ್ತು ರಾಜಸ್ಥಾನ ಸರಕಾರಗಳು, ಉತ್ತರಪ್ರದೇಶ ಸರಕಾರದಂತೆ ಹೆಣ್ಣುಮಕ್ಕಳ ಅತ್ಯಾಚಾರ ಪ್ರಕರಣವನ್ನು ಕಡೆಗಣಿಸುತ್ತಿರಲಿಲ್ಲ. ಒಂದು ವೇಳೆ ಹಾಗೇನಾದರೂ ಆದರೆ, ನಾನೇ ಅಲ್ಲಿಗೆ ಹೋಗಿ ನ್ಯಾಯಕ್ಕಾಗಿ ಹೋರಾಡುತ್ತಿದ್ದೆ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

Vijaya Karnataka Web 24 Oct 2020, 9:44 pm
ಹೊಸದಿಲ್ಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹತ್ರಾಸ್‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರ ಹಾಗೂ ಕೇಂದ್ರ ಸರಕಾರದ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.
Vijaya Karnataka Web rahul gandhi
Former AICC president Rahul Gandhi (file photo)




ಪಂಜಾಬ್‌ ಮತ್ತು ರಾಜಸ್ಥಾನ ಸರಕಾರಗಳು, ಉತ್ತರಪ್ರದೇಶ ಸರಕಾರದಂತೆ ಹೆಣ್ಣುಮಕ್ಕಳ ಅತ್ಯಾಚಾರ ಪ್ರಕರಣವನ್ನು ಕಡೆಗಣಿಸುತ್ತಿರಲಿಲ್ಲ. ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿರಲಿಲ್ಲ. ಆ ಕುಟುಂಬಕ್ಕೆ ನ್ಯಾಯ ದೊರೆಯುವುದನ್ನು ತಡೆಯುತ್ತಿರಲಿಲ್ಲ ಎಂದು. ಒಂದು ವೇಳೆ ಹಾಗೇನಾದರೂ ಆದರೆ, ನಾನೇ ಅಲ್ಲಿಗೆ ಹೋಗಿ ನ್ಯಾಯಕ್ಕಾಗಿ ಹೋರಾಡುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.



ರಾಹುಲ್‌ ಗಾಂಧಿ ಮಾಡಿರುವ ಈ ಟ್ವೀಟ್‌ ಅನ್ನು ಚಿತ್ರನಟ ಪ್ರಕಾಶ್‌ ರಾಜ್‌ ಅವರು ಮರು ಟ್ವೀಟ್‌ ಮಾಡಿದ್ದು, 'ದಟ್ಸ್ ದ ವೇ' (ಅದೊಂದೇ ದಾರಿ) ಎಂದಿದ್ದಾರೆ.

ಅಧಿಕಾರದಲ್ಲಿದ್ದಿದ್ದರೆ ಕೇವಲ 15 ನಿಮಿಷಗಳಲ್ಲಿ ಚೀನಾವನ್ನು ಮಣಿಸುತ್ತಿದ್ದೆ: ರಾಹುಲ್ ಗಾಂಧಿ!

ಇತ್ತೀಚೆಗಷ್ಟೇ ರಾಹುಲ್‌ ಗಾಂಧಿ ಅವರು ಚೀನಾ ಗಡಿ ತಂಟೆ ಬಗ್ಗೆಯೂ ಹೇಳಿಕೆ ನೀಡಿದ್ದರು. ಮೋದಿ ಸರಕಾರ ಲಡಾಖ್‌ ಗಡಿ ಸಂಗರ್ಷವನ್ನು ನಿಭಾಯಿಸಲು ವಿಫಲವಾಗಿದೆ. ಒಂದು ವೇಳೆ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಿದ್ದರೆ, ಕೇವಲ 15 ನಿಮಿಷಗಳಲ್ಲಿ ಲಡಾಖ್ ಗಡಿಯಿಂದ ಚೀನಾವನ್ನು ಹಿಂದಕ್ಕೆ ಕಳಿಸುತ್ತಿದ್ದೆವು ಎಂದು ಹೇಳಿದ್ದರು.

ಸೋಂಕು ನಿರ್ವಹಣೆಯಲ್ಲಿ ಪಾಕಿಸ್ತಾನವೇ ಉತ್ತಮ: ರಾಹುಲ್‌ ಗಾಂಧಿ

ಕೊರೊನಾ ಬಿಕ್ಕಟ್ಟು ನಿಭಾಯಿಸುವ ವಿಷಯದಲ್ಲಿ ಭಾರತಕ್ಕಿಂತಲೂ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಉತ್ತಮ ಸಾಧನೆ ಮಾಡಿವೆ. ನಮ್ಮ ದೇಶದ ಆರ್ಥಿಕತೆ ಕೂಡ ಹಳ್ಳ ಹಿಡಿದಿದ್ದು, ಎಲ್ಲಾ ರಂಗಗಳಲ್ಲಿಯೂ ಮೋದಿ ಸರಕಾರ ವಿಫಲಗೊಂಡಿದೆ,'' ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ