ಆ್ಯಪ್ನಗರ

ಕೊತ ಕೊತ ಕುದಿಯುತ್ತಿದೆ ಉತ್ತರ ಭಾರತ

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ, ಕಲಬುರಗಿಯಲ್ಲಿ ಸೋಮವಾರ 44.1 ಡಿಗ್ರಿ ಸೆಲ್ಷಿಯಸ್ ತಾಪಮಾನವಿತ್ತು. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ತಾಪಮಾನ 43 ಡಿಗ್ರಿಗೆ ಏರುವ ಸಾಧ್ಯತೆ ಇದೆ.

Vijaya Karnataka Web 28 May 2019, 5:00 pm
ಹೊಸದಿಲ್ಲಿ: ಉತ್ತರ ಭಾರತದ ಬಹುತೇಕ ಭಾಗಗಳು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳು ಕಾದ ಕಬ್ಬಿಣವಾಗಿದೆ.
Vijaya Karnataka Web ಬಿಸಿ ಗಾಳಿ
ಬಿಸಿ ಗಾಳಿ


ಈ ಎಲ್ಲ ರಾಜ್ಯಗಳಲ್ಲಿ ತೀವ್ರ ಬಿಸಿಗಾಳಿ ಬೀಸುತ್ತಿದ್ದು, ತಾಪಮಾನ 40 ಡಿಗ್ರಿ ಸೆಲ್ಷಿಯಸ್‌ಗಿಂತಲೂ ಹೆಚ್ಚಾಗಿದೆ.

ತೆಲಂಗಾಣದ ರಾಮಗುಂಡಂನಲ್ಲಿ ತಾಪಮಾನ 47.2 ಡಿಗ್ರಿ ಸೆಲ್ಷಿಯಸ್ ದಾಖಲಾಗಿದ್ದು, ಇದು ಈ ಬೇಸಿಗೆ ಋತುವಿನಲ್ಲಿ ಇದುವರೆಗಿನ ಅತಿ ಹೆಚ್ಚು ತಾಪಮಾನವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 31ರವರೆಗೆ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯಲಿದ್ದು, ಜನರು ಜಾಗರೂಕರಾಗಿರಬೇಕೆಂದು ಎಚ್ಚರಿಕೆ ನೀಡಲಾಗಿದೆ.

ಒಡಿಶಾದಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ರಾಜ್ಯದ ಕೆರೆ, ಹಳ್ಳ, ಹೊಂಡಗಳು ಒಣಗುತ್ತಿವೆ. ಅಂತರ್ಜಲ ಮಟ್ಟ ಕ್ರಮೇಣ ಕುಸಿಯುತ್ತಿದೆ. ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ.

ಆಂಧ್ರಪ್ರದೇಶದಲ್ಲೂ ರಣ ಬಿಸಿಲು ಮುಂದುವರಿದಿದೆ. ಇನ್ನೂ ಮೂರ್ನಾಲ್ಕು ದಿನ ಬಿಸಿಲಿನ ತಾಪ ಹೆಚ್ಚಿರುವುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಯಲಸೀಮಾ ಮತ್ತು ದಕ್ಷಿಣ ಆಂಧ್ರ ಕರಾವಳಿ ಪ್ರದೇಶದ ಬಹುತೇಕ ಸ್ಥಳಗಳಲ್ಲಿ ಬಿಸಿ ಗಾಳಿ ಪರಿಸ್ಥಿತಿ ತೀವ್ರಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ, ಕಲಬುರಗಿಯಲ್ಲಿ ಸೋಮವಾರ 44.1 ಡಿಗ್ರಿ ಸೆಲ್ಷಿಯಸ್ ತಾಪಮಾನವಿತ್ತು. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ತಾಪಮಾನ 43 ಡಿಗ್ರಿಗೆ ಏರುವ ಸಾಧ್ಯತೆ ಇದೆ.

ಪಂಜಾಬ್, ಹರಿಯಾಣ ಮತ್ತು ಚಂಡಿಗಢ ರಾಜ್ಯಗಳಲ್ಲಿ ಬಿಸಿಲಿನ ತಾಪ ಅಸಹನೀಯವಾಗಿದೆ. ಮುಂಬರುವ ದಿನಗಳಲ್ಲಿ ಈ ಪರಿಸ್ಥಿತಿ ಮುಂದುವರಿಯುವುದೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ