ಆ್ಯಪ್ನಗರ

ಕೇರಳದಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣ: ರಸ್ತೆ ತುಂಬೆಲ್ಲ ನೀರು, ಹಲವೆಡೆ ತೀವ್ರ ಭೂಕುಸಿತ!

ಕೇರಳದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಆತನ ಆರ್ಭಟಕ್ಕೆ ಹಲವೆಡೆ ಭೂಕುಸಿತ, ರಸ್ತೆ ಜಲಾವೃತವಾದ ಘಟನೆ ನಡೆದಿದೆ. ಅನೇಕ ಕಡೆಗಳಲ್ಲಿ ರಸ್ತೆ ಸಂಚಾರ ಬಂದ್‌ ಆಗಿದೆ ಇಡುಕ್ಕಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

TIMESOFINDIA.COM 30 Jul 2020, 7:06 am
ತಿರುವನಂತಪುರ: ಕೇರಳದಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಸಂಚಾರ ಬಂದ್‌ ಆಗಿದೆ. ಇಡುಕ್ಕಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ತಾಸುಗಳಲ್ಲಿ 20.5 ಸೆಂ. ಮೀ ಮಳೆ ಸುರಿಯಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Vijaya Karnataka Web EeFYAfdVoAU9Oz4


ಕೊಟ್ಟಾಯಂ, ಎರ್ನಾಕುಲಂ, ಪಾಲಕ್ಕಾಡ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಮಳೆ ಅಬ್ಬರ ಹೆಚ್ಚುವ ಮುನ್ಸೂಚನೆ ಇದ್ದು, ಇಲ್ಲೆಲ್ಲ ಆರೇಂಜ್‌ ಅಲರ್ಟ್‌ ಘೋಷಿಸ­ಲಾಗಿದೆ. ತಮಿಳು­ನಾಡು ಮತ್ತು ಕರ್ನಾಟಕದಲ್ಲೂ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ ಇದೆ.

ಇನ್ನು ಕೊರೊನಾದ ಸಮಯದಲ್ಲಿ ಈ ರೀತಿ ಮಳೆರಾಯನ ಆಗಮನದಿಂದ ಸ್ಥಳೀಯಾಡಳಿತಗಳಿಗೆ ಸಮಸ್ಯೆಯಾಗಿ ಬಿಟ್ಟಿದೆ. ನಿರಾಶ್ರಿತರಿಗೆ ತಾಣ ಒದಗಿಸಲು ಸಮಸ್ಯೆಯಾಗಿದೆ. ಯಾಕೆಂದರೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ ಕೆಲ ಪ್ರದೇಶಗಳಲ್ಲಿ ಕೊರೊನಾ ಹೆಚ್ಚಾಗಿ ಇದೆ. ಹೀಗಾಗಿ ರಕ್ಷಣಾ ಕಾರ್ಯಚರಣೆಗೆ ಇದು ತೊಡಕಾಗುವ ಸಾಧ್ಯತೆ ಇದೆ.

ಅನ್‌ಲಾಕ್‌ 3.0 ಮಾರ್ಗಸೂಚಿ: ಏನಿರುತ್ತೆ? ಏನಿರಲ್ಲ?

ಕಳೆದ ವರ್ಷ ಇಲ್ಲಿ ಮಳೆರಾಯನ ಅಬ್ಬರಕ್ಕೆರ ಪ್ರವಾಹವೇ ಸೃಷ್ಟಿಯಾಗಿತ್ತು. ಕೆಲ ಜನರು ಪ್ರವಾಹದಿಂದ ಪ್ರಾಣ ಕಳೆದುಕೊಂಡರೆ ಅನೇಕರು ಮನೆಗಳನ್ನ ಕಳೆದುಕೊಂಡಿದ್ದರು. ಎನ್‌ಡಿಆರ್‌ಎಫ್‌ ವಾಯುಸೇನೆ ಕೇರಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ